Home News ಆರನೇ ವರ್ಷದ ಮಹರ್ಷಿವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ

ಆರನೇ ವರ್ಷದ ಮಹರ್ಷಿವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ

0

ಜೀವನ ಮೌಲ್ಯಗಳನ್ನೊಳಗೊಂಡ ಮಹಾಕಾವ್ಯ ರಾಮಾಯಣ ಕೃತಿಯ ಮೂಲಕ ಸಮಾಜದಲ್ಲಿನ ಪ್ರತಿಯೊಬ್ಬ ಮಾನವನು ಸನ್ಮಾರ್ಗವನ್ನು ಕಾಣುವಂತಹ ಅವಕಾಶವನ್ನು ಮಹರ್ಷಿ ವಾಲ್ಮೀಕಿ ಅವರು ಒದಗಿಸಿಕೊಟ್ಟಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಸಾಹಿತ್ಯ ಆಕಾಡೆಮಿ ಸದಸ್ಯ ಬಿ.ಎಂ.ಪಟೇಲ್ಪಾಂಡು ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಮಂಗಳವಾರ ನಾಡಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜನೆ ಮಾಡಲಾಗಿದ್ದ ಆರನೇ ವರ್ಷದ ಮಹರ್ಷಿವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಮಾತನಾಡಿದರು.

ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಮಂಗಳವಾರ ನಾಡಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜನೆ ಮಾಡಲಾಗಿದ್ದ ಆರನೇ ವರ್ಷದ ಮಹರ್ಷಿವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಆಕಾಡೆಮಿ ಸದಸ್ಯ ಬಿ.ಎಂ.ಪಟೇಲ್ಪಾಂಡು ಮಾತನಾಡಿದರು. ಶಾಸಕ ಎಂ.ರಾಜಣ್ಣ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ಬಂಕ್ಮುನಿಯಪ್ಪ, ಎನ್.ಮುನಿಯಪ್ಪ, ಯರ್ರಬಚ್ಚಪ್ಪ ಉಪಸ್ಥಿತರಿದ್ದರು.
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಮಂಗಳವಾರ ನಾಡಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜನೆ ಮಾಡಲಾಗಿದ್ದ ಆರನೇ ವರ್ಷದ ಮಹರ್ಷಿವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಆಕಾಡೆಮಿ ಸದಸ್ಯ ಬಿ.ಎಂ.ಪಟೇಲ್ಪಾಂಡು ಮಾತನಾಡಿದರು. ಶಾಸಕ ಎಂ.ರಾಜಣ್ಣ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ಬಂಕ್ಮುನಿಯಪ್ಪ, ಎನ್.ಮುನಿಯಪ್ಪ, ಯರ್ರಬಚ್ಚಪ್ಪ ಉಪಸ್ಥಿತರಿದ್ದರು.
ಪ್ರಪಂಚದ ಎಲ್ಲಾ ಕಾವ್ಯಗಳಲ್ಲಿ ಅತ್ಯುನ್ನತ ಸ್ಥಾನದಲ್ಲಿರುವ ಮಹಾಕಾವ್ಯ ರಾಮಾಯಣ ವಿಜ್ಞಾನಿಯ ಮನಸ್ಸಿಗೂ ನಿಲುಕದಂತಹ ಕೃತಿಯಾಗಿದ್ದು, ಎಲ್ಲಾ ಕಾಲಘಟ್ಟಗಳಲ್ಲಿಯೂ ಸಲ್ಲುವಂತಹದ್ದಾಗಿದೆ. ಒಂದು ಆದರ್ಶ ಕುಟುಂಬದಲ್ಲಿನ ಉತ್ತಮವಾದ ಸಂಬಂಧಗಳನ್ನು ಕುರಿತು, ಆದರ್ಶ ರಾಜನ ನಡುವಳಿಕೆ, ಹಾಗೂ ಆದರ್ಶ ಪತ್ನಿಯ ಕರ್ತವ್ಯಗಳನ್ನು ಸಮಾಜಕ್ಕೆ ಸಾರಿ ಹೇಳುವ ರೀತಿಯಲ್ಲಿ ರಚನೆ ಮಾಡಿದ್ದಾರೆ. ಬಹಳ ಮುಖ್ಯವಾಗಿ ಶ್ರೀರಾಮನ ಮಕ್ಕಳಾದ ಲವ-ಕುಶರನ್ನು ಶ್ರೀರಾಮನಷ್ಟೆ ಸಮರ್ಥರನ್ನಾಗಿ ಮಾಡುವ ಮೂಲಕ ಮಹರ್ಷಿ ವಾಲ್ಮೀಕಿಯವರ, ಆದರ್ಶ, ದೂರದೃಷ್ಟಿ ಪ್ರತಿಯೊಬ್ಬ ಮಾನವನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಸಮಾಜದಲ್ಲಿನ ಮೌಡ್ಯತೆಯನ್ನು ತೊಲಗಿಸಿ, ಜನರ ಮನದಾಳದ ಅಂಧಕಾರವನ್ನು ತೊಲಗಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡುವಂತಹ ರೀತಿಯಲ್ಲಿ ಸಂತರಾಗಿ, ದಾರ್ಶನಿಕ ಕವಿಗಳಾದ ವಾಲ್ಮೀಕಿ ಮಹಾಋಷಿಯನ್ನು ಪ್ರತಿನಿತ್ಯವೂ ನೆನೆಯಬೇಕು. ಪ್ರತಿಯೊಂದು ಮನೆಯಲ್ಲಿ ರಾಮಾಯಣ ಕೃತಿಯನ್ನು ಧ್ಯಾನಿಸುವಂತಾಗಬೇಕು. ಯುವಜನತೆ ಹೆಚ್ಚು ವ್ಯಸನಗಳಿಂದ ದೂರವಾಗಿ ಇಂತಹ ಕಾವ್ಯಗಳನ್ನು ಓದುವುದರಿಂದ ಉತ್ತಮವಾದ ಸಂಬಂಧಗಳ ಪರಿಚಯವಾಗುತ್ತದೆ ಎಂದರು.
ವಾಲ್ಮೀಕಿ ಸಮುದಾಯದ ಮುಖಂಡರಾದ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ಬಂಕ್ಮುನಿಯಪ್ಪ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎನ್.ಮುನಿಯಪ್ಪ ಅವರನ್ನು ಸನ್ಮಾನಿಸಲಾಯಿತು
ಇದೇ ವೇಳೆ ವಾಲ್ಮೀಕಿ ಸಮುದಾಯದ ಮುಖಂಡರಾದ ಬಂಕ್ಮುನಿಯಪ್ಪ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎನ್.ಮುನಿಯಪ್ಪ ಅವರನ್ನು ಸನ್ಮಾನಿಸಲಾಯಿತು, ಎಸ್.ಎಸ್.ಎಲ್.ಸಿ.ಮತ್ತು ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಶಿಡ್ಲಘಟ್ಟದ ಚಿಂತಾಮಣಿ ರಸ್ತೆಯಲ್ಲಿರುವ ವಾಲ್ಮೀಕಿ ದೇವಾಲಯದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ಪಲ್ಲಕ್ಕಿಗಳೊಂದಿಗೆ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ಪಾಲ್ಗೊಂಡಿದ್ದರು. ಮಹಿಳೆಯರಿಂದ ಡೊಳ್ಳುಕುಣಿತ, ವೀರಗಾಸೆ ಕುಣಿತ, ಕೀಲುಕುದುರೆಗಳು ಮುಂತಾದ ಸಾಂಸ್ಕೃತಿಕ ಕಲಾತಂಡಗಳು ಮೆರವಣಿಗೆಗೆ ಮೆರಗು ತಂದಿದ್ದವು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ವಾಲ್ಮೀಕಿ ದೇವಾಲಯದಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು, ಹಲವಾರು ಪಲ್ಲಕ್ಕಿಗಳಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಬಹು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರಿಂದ ಡೊಳ್ಳುಕುಣಿತ, ವೀರಗಾಸೆ ಕುಣಿತ, ಕೀಲುಕುದುರೆಗಳು ಮುಂತಾದ ಸಾಂಸ್ಕೃತಿಕ ಕಲಾತಂಡಗಳು ಮೆರವಣಿಗೆಗೆ ಮೆರಗು ತಂದಿದ್ದವು.
ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ಬಂಕ್ಮುನಿಯಪ್ಪ, ಎನ್.ಮುನಿಯಪ್ಪ, ಯರ್ರಬಚ್ಚಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್, ನಗರಸಭಾ ಆಯುಕ್ತ ಹರೀಶ್, ಸದಸ್ಯ ಅಪ್ಸರ್ಪಾಷಾ, ಎನ್.ಕೆ.ಗುರುರಾಜರಾವ್, ವೆಂಕಟಪ್ಪ, ಜೆ.ಎಂ.ವೆಂಕಟೇಶ್, ತ್ಯಾಗರಾಜು, ನಾರಾಯಣಸ್ವಾಮಿ, ಮುನಿರಾಜು, ಚಿಕ್ಕಆಂಜಿನಪ್ಪ, ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.