Home News ಆರಿಸಿ ಬೆಂಕಿಯನ್ನು, ಉಳಿಸಿ ಗೋಮಾಳದಲ್ಲಿನ ಜೀವ ಸಂಕುಲವನ್ನು

ಆರಿಸಿ ಬೆಂಕಿಯನ್ನು, ಉಳಿಸಿ ಗೋಮಾಳದಲ್ಲಿನ ಜೀವ ಸಂಕುಲವನ್ನು

0

ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಲಕಾಯಲಬೆಟ್ಟ ಗ್ರಾಮದಲ್ಲಿ ಈಚೆಗೆ ಫೌಂಡೇಶನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ (ಎಫ್. ಇ. ಎಸ್) ಸಂಸ್ಥೆಯು ಬೆಂಕಿ ತಡೆಗೆ ಜನ ಜಾಗೃತಿ ಆಂದೋಲನವನ್ನು ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಎಫ್.ಇ.ಎಸ್. ಸಂಸ್ಥೆಯ ಯೋಜನಾಧಿಕಾರಿಗಳಾದ ನಿಖತ್, ಶಿಲ್ಪಾ ಹಾಗೂ ಪ್ರತಿನಿಧಿಗಳಾದ ಕೃಷ್ಣಪ್ಪ, ಗೋಪಿ,ಲೀಲಾವತಿ, ಸೌಭಾಗ್ಯ, ಬೆಂಕಿಯ ಅನಾಹುತ ಮತ್ತು ಮುಂಜಾಗೃತಾ ಕ್ರಮಗಳ ಕುರಿತಾಗಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಬೇಸಿಗೆ ಕಾಲ ಬಂತೆಂದರೆ ಗ್ರಾಮದ ಸಾಮೂಹಿಕ ಆಸ್ತಿಗಳಾದ ಗೋಮಾಳ, ಗುಂಡುತೋಪು, ಬೆಟ್ಟ, ಗುಡ್ಡ ಹಾಗೂ ಅರಣ್ಯಗಳಿಗೆ ಬೆಂಕಿ ಬೀಳುವ ಸಾದ್ಯತೆಗಳು ಹೆಚ್ಚಾಗಿರುವುದರಿಂದ, ಗ್ರಾಮದ ಜನರು ಇಂತಹ ಬೆಂಕಿಯ ಗಂಡಾಂತರಗಳನ್ನು ತಡೆಯಲು ಅಗತ್ಯ ಮಂಜಾಗೃತಿ ಕ್ರಮಗಳನ್ನು ತೆಗೆದುಕೊಳ್ಳುಲು ಗ್ರಾಮಸ್ಥರಿಗೆ ತಿಳುವಳಿಕೆ ನೀಡಿದರು. ಇದರ ಜೊತೆಗೆ ಪರಿಸರವನ್ನೇ ಅವಲಂಬಿತವಾದ ಪ್ರಾಣಿ, ಪಕ್ಷಿ, ಸಸ್ಯವರ್ಗ ಹಾಗೂ ಜೀವ ಸಂಕುಲಗಳ ಅವಲಂಬನೆ ಕುರಿತು ವಿವರಿಸಲಾಯಿತು. ಈ ಕಾರ್ಯಕ್ರಮವನ್ನು ಜನರಿಗೆ ಹಾಡುಗಳ ಮೂಲಕ ಮನವರಿಕೆ ಮಾಡಿಕೊಡಲಾಯಿತು.