Home News ಆರೋಗ್ಯವಂತ ಪರಿಸರ ಸೃಷ್ಠಿಸಿ – ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಕೆ.ಮಂಜುನಾಥ್

ಆರೋಗ್ಯವಂತ ಪರಿಸರ ಸೃಷ್ಠಿಸಿ – ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಕೆ.ಮಂಜುನಾಥ್

0

ಆರೋಗ್ಯವಂತ ಪರಿಸರಕ್ಕಾಗಿ ಸ್ವಚ್ಛತೆ ಹಾಗೂ ಶೇಕಡಾ ನೂರರಷ್ಟು ಶೌಚಾಲಯವನ್ನು ಹೊಂದುವುದು ಅತ್ಯವಶ್ಯ ಎಂದು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಕೆ.ಮಂಜುನಾಥ್‌ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು. ನೈರ್ಮಲ್ಯತೆಗೆ ಆದ್ಯತೆ ನೀಡುವುದರಿಂದ ಸ್ವಚ್ಛ ಶುಭ್ರ ಆರೋಗ್ಯಪೂರ್ಣ ಗ್ರಾಮಗಳಾಗುತ್ತವೆ, ಇತರರಿಗೆ ಮಾದರಿಯಾಗುತ್ತದೆ ಎಂದು ಹೇಳಿದರು.
ನೋಡೆಲ್‌ ಅಧಿಕಾರಿ ಗುರುಬಸಪ್ಪ ಮಾತನಾಡಿ ನರೇಗಾ ಯೋಜನೆಯಲ್ಲಿ ಸಿಸಿ ರಸ್ತೆಗಳನ್ನು ಮಾಡಬಹುದಾಗಿದೆ ಎಂದು ವಿವರಿಸಿದರು.
ಪ್ರಭಾರ ಅಭಿವೃದ್ಧಿ ಅಧಿಕಾರಿ ಸಿದ್ದಣ್ಣ, ಲೆಕ್ಕ ಪರಿಶೋಧಕ ಶ್ರೀನಿವಾಸ್‌, ಗ್ರಾಮ ಪಂಚಾಯತಿ ಅಧ್ಯಕ್ಷೆ ಮುನಿರತ್ನಮ್ಮ ತಿರುಮಳೇಶ್‌, ಸದಸ್ಯರಾದ ಮುನಿಕೃಷ್ಣಪ್ಪ, ರೂಪೇಶ್‌, ಸ್ಮಿತಾ ಸುರೇಶ್‌, ಕೃಷ್ಣಮ್ಮ ನಾಗರಾಜ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.