ಬುಧವಾರ ಸಂಜೆ ಬಿದ್ದ ಬಾರೀ ಬಿರುಗಾಳಿ ಸಹಿತ ಆಲಿಕಲ್ಲಿನ ಅಕಾಲಿಕ ಮಳೆಯಿಂದಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿ, ಕಂಬದಹಳ್ಳಿ, ಗಂಗನಹಳ್ಳಿ, ಮೇಲೂರು, ಮಳ್ಳೂರು, ಮುತ್ತೂರು ಗ್ರಾಮಗಳಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ದ್ರಾಕ್ಷಿ, ಹಿಪ್ಪುನೇರಳೆ, ಬಾಳೇಗಿಡ ಸೇರಿದಂತೆ ತರಕಾರಿ ಬೆಳೆಗಳು ನಷ್ಟವಾಗಿವೆ.
ಅಕಾಲಿಕ ಮಳೆಯಿಂದ ನಷ್ಟಕ್ಕೀಡಾಗಿದ್ದ ಪ್ರದೇಶಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಅಮರೇಶ್, ಶಾಸಕ ಎಂ.ರಾಜಣ್ಣ, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಸೇರಿದಂತೆ ರೇಷ್ಮೆ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರನ್ನು ಸಮಾಧಾನಪಡಿಸಿದ ಅಧಿಕಾರಿಗಳು, ನಿಮ್ಮ ಸಂಕಟ ನಮಗೂ ಅರ್ಥವಾಗುತ್ತದೆ, ನಾವು ರೈತರ ಮಕ್ಕಳು, ನಾವು ಅಧಿಕಾರಿಗಳೆನ್ನುವುದಕ್ಕಿಂತ ರೈತರಾಗಿ ನಾವು ದ್ರಾಕ್ಷಿ ಬೆಳೆಯುತ್ತಿದ್ದು, ನಮಗೂ ನಿಮ್ಮ ಪರಿಸ್ಥಿತಿ ಅರ್ಥವಾಗುತ್ತದೆ ಎಂದು ಸಮಾಧಾನಪಡಿಸಿದರು.
ನಂತರ ದ್ರಾಕ್ಷಿ ಬೆಳೆಗಳ ವೀಕ್ಷಣೆ ಮಾಡಿದ ಶಾಸಕ ಎಂ.ರಾಜಣ್ಣ ಮಾತನಾಡಿ, ಕಳೆದ ವರ್ಷದಂತೆ ಈ ಭಾಗದಲ್ಲಿ ಈ ವರ್ಷವೂ ಕೂಡಾ ಆಲಿಕಲ್ಲು ಮಳೆಯಿಂದಾಗಿ ರೈತರು ಬಹಳಷ್ಟು ಸಂಕಷ್ಟವನ್ನು ಅನುಭವಿಸುವಂತಾಗಿದೆ, ವಿಧಾನಸಭೆಯ ಅಧಿವೇಶನ ನಡೆಯುತ್ತಿರುವುದರಿಂದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಈ ಭಾಗದ ರೈತರುಗಳ ಸಂಕಷ್ಟವನ್ನು ಮನವರಿಕೆ ಮಾಡಿಕೊಟ್ಟು ಈ ಭಾಗದ ರೈತರುಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುಂವಂತೆ ಮನವಿ ಮಾಡುವುದಾಗಿ ಹೇಳಿದರು.
ಅಪ್ಪೇಗೌಡನಹಳ್ಳಿ, ಕಂಬದಹಳ್ಳಿ, ಮೇಲೂರು, ಗಂಗನಹಳ್ಳಿ, ಮುತ್ತೂರು, ಮಳ್ಳೂರು ಗ್ರಾಮಗಳಿಗೆ ಬೇಟಿ ನೀಡಿ ಅವರು ಬೆಳೆಗಳನ್ನು ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯತಿ ಸದಸ್ಯ ಸತೀಶ್, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್, ರೇಷ್ಮೆ ಇಲಾಖೆ ಕೃಷಿ ವಿಸ್ತರಣಾಧಿಕಾರಿ ನಾರಾಯಣಸ್ವಾಮಿ, ರಾಜಸ್ವ ನಿರೀಕ್ಷಕ ಸುಭ್ರಮಣಿ, ಜಿ.ವಿ.ದೇವರಾಜು, ರೈತರಾದ ಸುರೇಂದ್ರಗೌಡ, ಬಚ್ಚೇಗೌಡ, ಮುನಿಶಾಮಿಗೌಡ, ಚಿಕ್ಕಮುನಿಯಪ್ಪ, ಪ್ರಭಾಕರ್, ಶ್ರೀನಿವಾಸಮೂರ್ತಿ, ತ್ಯಾಗರಾಜ್, ಶ್ರೀನಿವಾಸ್, ಪ್ರಭಾಕರ್ ಮುಂತಾದವರು ಹಾಜರಿದ್ದರು.
- Advertisement -
- Advertisement -
- Advertisement -