Home News ಆಶಾಕಾರ್ಯಕರ್ತೆಯರ ಸಲಹೆ ಸೂಚನೆ ಪಾಲಿಸಿ – ತನುಜಾ ರಘು

ಆಶಾಕಾರ್ಯಕರ್ತೆಯರ ಸಲಹೆ ಸೂಚನೆ ಪಾಲಿಸಿ – ತನುಜಾ ರಘು

0

ತಾಲ್ಲೂಕಿನ ಮೇಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿ ಹಾಗೂ ಆಶಾಕಾರ್ಯಕರ್ತೆಯರಿಗೆ ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಸೇವಾಭಿವೃದ್ಧಿ ಚಾರಿಟೆಬಲ್ ಟ್ರಸ್ಟ್ ಹಾಗೂ ಬಿ.ಎನ್.ರವಿಕುಮಾರ್ ಅಭಿಮಾನ ಬಳಗದಿಂದ ಶನಿವಾರ ಆಹಾರ ದಾನ್ಯಗಳ ಕಿಟ್ ವಿತರಿಸಿ ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು ಮಾತನಾಡಿದರು.
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ನಿರಂತರವಾಗಿ ದುಡಿಯುತ್ತಿದ್ದಾರೆ. ಸಾರ್ವಜನಿಕರು ಅವರ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸುವ ಮೂಲಕ ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ತಡೆಗಟ್ಟಲು ಸಹಕರಿಸಬೇಕು ಎಂದು ತಿಳಿಸಿದರು.
ಆರೋಗ್ಯ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಕಳೆದ ಒಂದು ತಿಂಗಳಿನಿಂದ ಮನೆ, ಮಕ್ಕಳು ಕುಟುಂಬಗಳನ್ನು ಬಿಟ್ಟು ನಮಗಾಗಿ ದುಡಿಯುತ್ತಿದ್ದಾರೆ. ಇವರ ಕಾರ್ಯಕ್ಕೆ ಯಾವುದೇ ಬೆಲೆ ಕಟ್ಟಲಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಮಗಾಗಿ ದುಡಿಯುತ್ತಿರುವ ಆರೋಗ್ಯ ಸಿಬ್ಬಂದಿಗೆ ನಾವೆಲ್ಲಾ ಕೃತಜ್ಞರಾಗಿರಬೇಕು ಎಂದರು.
ಈ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಇರುವ 12 ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿ ಹಾಗೂ ಆಶಾಕಾರ್ಯಕರ್ತೆಯರಿಗೆ ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಸೇವಾಭಿವೃದ್ಧಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅಗತ್ಯ ಆಹಾರ ದಾನ್ಯಗಳ ಕಿಟ್ ವಿತರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮೇಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ 35 ಮಂದಿ ಆಶಾ ಕಾರ್ಯಕರ್ತೆಯರಿಗೆ ಟ್ರಸ್ಟ್ ವತಿಯಿಂದ ಆಹಾರ ಕಿಟ್ ಜೊತೆಗೆ ತಲಾ 500 ರೂ ನಗದು ಸಹ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್, ಡಾ.ಉಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ, ಮಾಜಿ ಅಧ್ಯಕ್ಷ ಆರ್.ಎ.ಉಮೇಶ್ ಹಾಜರಿದ್ದರು.
 

error: Content is protected !!