24.1 C
Sidlaghatta
Monday, February 16, 2026

ಆಹಾರ ಇಲಾಖೆಯ ಅಧಿಕಾರಿ ವಿರುದ್ಧ ರೈತರ ಪ್ರತಿಭಟನೆ

- Advertisement -
- Advertisement -

ತಾಲ್ಲೂಕಿನ ಆಹಾರ ಇಲಾಖೆಯ ಅಧಿಕಾರಿ ರೈತನೊಂದಿಗೆ ಅವಾಚ್ಯ ಶಬ್ಧ ಬಳಸಿ ಮಾತನಾಡಿರುವುದರಿಂದ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ರೈತಸಂಘದ ಪದಾಧಿಕಾರಿಗಳು ಮಂಗಳವಾರ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟಿಸಿದರು.
ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿನ ಸೀಮೆಎಣ್ಣೆ ವಿತರಣೆಯಲ್ಲಿ ಲೋಪದೋಷದ ಬಗ್ಗೆ ತಿಳಿಸಲು ಹೋದಾಗ ಆಹಾರ ನಿರೀಕ್ಷಕರು ಕೆಟ್ಟ ಶಬ್ಧಗಳಲ್ಲಿ ಬೈದಿದ್ದಾರೆ. ಜಿಲ್ಲಾ ಆಹಾರ ಇಲಾಖೆ ಉಪನಿರ್ದೇಶಕರು ನಿಮ್ಮನ್ನು ಭೇಟಿ ಮಾಡಲು ತಿಳಿಸಿದರು ಎಂದರೂ ಅವರನ್ನೂ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಈ ಅಧಿಕಾರಿಯ ಬಗ್ಗೆ ಸಾರ್ವಜನಿಕರಿಂದ ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಸಂಘದ ಸದಸ್ಯರು ಪ್ರತಿಭಟಿಸಿದರು.
ಆನೆಮಡುಗು ರೈತ ಆರ್. ಶಿವಣ್ಣ ಕಪ್ಪುಪಟ್ಟಿಯನ್ನು ಬಾಯಿಗೆ ಕಟ್ಟಿಕೊಂಡು ಬೈದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಧರಣಿ ಕುಳಿತಿದ್ದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮನೋರಮಾ ಪ್ರತಿಭಟನಾ ನಿರತರನ್ನು ಮನವೊಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ರೈತ ಸಂಘದ ಸದಸ್ಯರು ಈ ಬಗ್ಗೆ ಜಿಲ್ಲಾ ಆಹಾರ ಇಲಾಖೆ ಉಪನಿರ್ದೇಶಕರಿಗೂ ದೂರನ್ನು ನೀಡಿದರು.
ರವಿಪ್ರಕಾಶ್, ಪ್ರತೀಶ್, ಆನೆಮಡುಗು ಚಂದ್ರಶೇಖರ್, ಬೆಳ್ಳೂಟಿ ಹರೀಶ್, ಚಿಕ್ಕದಾಸರಹಳ್ಳಿ ಮುನೇಗೌಡ, ದೇವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!