ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ ಡಾ.ಪುವ್ವಾಡ ಸಂದೀಪ್ ಅವರು ಶಸ್ತ್ರಚಿಕಿತ್ಸೆ ಮೂಲಕ ರೋಗಪೀಡಿತ ಮೂತ್ರಪಿಂಡ ಹೊತತೆಗೆದಿರುವುದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಅಧಿಕೃತವಾಗಿ ದಾಖಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಮೂತ್ರ ವಿಭಾಗದ (ಯೂರಾಲಜಿ) ತಜ್ಞ ವೈದ್ಯ ಮಳ್ಳೂರಿನ ಡಾ.ಪುವ್ವಾಡ ಸಂದೀಪ್ ಅವರ ನೇತೃತ್ವದ ವೈದ್ಯರ ತಂಡ, ಅಪರೂಪದ ಶಸ್ತ್ರಚಿಕಿತ್ಸೆ ಮೂಲಕ ರೋಗಿಯೊಬ್ಬರ ರೋಗಪೀಡಿತ ೭.೨ ಕೆ.ಜಿ ಗಾತ್ರದ ಮೂತ್ರಪಿಂಡವನ್ನು (ಕಿಡ್ನಿ) ಯಶಸ್ವಿಯಾಗಿ ಹೊರತೆಗೆದಿದ್ದರು. “ರೆಟ್ರೊಪೆರಿಟೋನಿಯಲ್ ನೆಫ್ರೆಕ್ಟೊಮಿ” ಶಸ್ತ್ರಚಿಕಿತ್ಸೆ ಮೂಲಕ ರೋಗಗ್ರಸ್ತ ಕಿಡ್ನಿಯನ್ನು ತೆಗೆದಿದ್ದು, ರೋಗಿಯೊಬ್ಬರ ದೇಹದಿಂದ ಹೊರತೆಗೆದ ಅತಿದೊಡ್ಡ ಕಿಡ್ನಿ (೩೧ ಸೆ.ಮೀ ಉದ್ದ ಮತ್ತು ೧೩ ಸೆ.ಮೀ ಅಗಲ) ಇದು ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪರಿಗಣಿಸಿದ್ದು, ೨೦೨೧ ರ ತನ್ನ ಪ್ರಕಟಣೆಯಲ್ಲಿ ಚಿತ್ರ ಸಮೇತ ಪ್ರಕಟಿಸುವುದಾಗಿ ತಿಳಿಸಿದೆ.