ನಗರೋತ್ಥಾನ ಮೂರನೇ ಹಂತದ ಕಾಮಗಾರಿಗಾಗಿ ಇಪ್ಪತ್ತೈದು ಕೋಟಿ ರೂಗಳು ಮಂಜೂರಾಗಿದ್ದು ನಗರಸಭೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಶೀಘ್ರವಾಗಿ ನಡೆಯಲಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಸಲ್ಲಾಪುರಮ್ಮ ದೇವಾಲಯದ ಮುಂಭಾಗದಿಂದ ಮಂಗಳವಾರ ಪ್ರಾರಂಭವಾದ ನಗರೋತ್ಥಾನ ಮೂರನೇ ಹಂತದ ಅಂದಾಜು ಪಟ್ಟಿಗಳ ತಯಾರಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇವಲ ಒಂದು ತಿಂಗಳ ಅವಧಿಯಲ್ಲಿ ಪಿ.ಎಂ.ಸಿ ತಂಡದಿಂದ ಅಂದಾಜು ಪಟ್ಟಿಯನ್ನು ಪಡೆದು ಜಿಲ್ಲಾಧಿಕಾರಿಗಳಿಗೆ ನೀಡಿ ಅನುಮೋದನೆ ಪಡೆಯಲಾಗುತ್ತದೆ. ನಂತರ ಟೆಂಡರ್ ಕರೆದು ಎರಡು ತಿಂಗಳೋಳಗೆ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ನಗರದ ಸಮಗ್ರ ಅಭಿವೃದ್ಧಿಗೆ ಕಾಮಗಾರಿಗಳು ಗುಣಮಟ್ಟದಲ್ಲಿ, ವೇಗವಾಗಿ ನಡೆಯಬೇಕಿದೆ. ಇದೇ ಯೋಜನೆಯಡಿಯಲ್ಲಿ ಸುಸಜ್ಜಿತವಾದ ನಗರಸಭಾ ಕಚೇರಿ ಹಾಗೂ ಭವನವನ್ನು ಐದೂವರೆ ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.
ನಗರಸಭಾ ಅಧ್ಯಕ್ಷ ಅಫ್ಸರ್ಪಾಷ, ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಆಯುಕ್ತ ಹರೀಶ್, ನಗರಸಭಾ ಸದಸ್ಯರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -