ಮಾಜಿ ಸಚಿವ ವಿ.ಮುನಿಯಪ್ಪ ಅವರ ಜೇಷ್ಠ ಪುತ್ರ ಡಾ. ಎಂ.ಶ್ರೀಧರ್ (೪೨) ನಿಧನ ಹೊಂದಿದ್ದಾರೆ. ಕಳೆದ ಒಂದು ವಾರದಿಂದಲೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಅವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ.
ಮೃತರು ಮಾಜಿ ಸಚಿವರೂ ಆದ ತಂದೆ ವಿ.ಮುನಿಯಪ್ಪ, ತಾಯಿ ರತ್ನಮ್ಮ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರೂ ಆದ ತಮ್ಮ ಎಂ.ಶಶಿಧರ್, ಪತ್ನಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಡಾ. ಎಂ.ಶ್ರೀಧರ್ ಅವರು ಬೆಂಗಳೂರಿನ ಎಂ.ಎಸ್.ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯಲ್ಲಿ ಪ್ರೊಪೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರಲ್ಲದೆ ಶ್ರೀವೆಂಕಟೇಶ್ವರ ಇಂಜಿನಿಯರಿಂಗ್ ಕಾಲೇಜಿನ ಟ್ರಸ್ಟ್ನ ನಿರ್ದೆಶಕರೂ ಆಗಿದ್ದರು.
ಅವರು ಹುಟ್ಟೂರಾದ ಶಿಡ್ಲಘಟ್ಟ ತಾಲೂಕು ಹಂಡಿಗನಾಳದ ಸ್ವಗೃಹದಲ್ಲಿ ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ವ್ಯವಸ್ಥೆ ಮಾಡಲಾಗುವುದೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







