ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲಿಸಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಿದ್ದ ಈ.ತಿಮ್ಮಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಗುರುವಾರ ನಡೆದು ಅದು ಕಾಂಗ್ರೆಸ್ ಬೆಂಬಲಿತರ ಪಾಲಾಗಿದೆ.
ಅಧ್ಯಕ್ಷರಾಗಿ ಹಳೇಹಳ್ಳಿ ಎಂ.ವಿ.ದೇವರಾಜು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹಳೇಹಳ್ಳಿ ಎಂ.ವಿ.ದೇವರಾಜು ಮತ್ತು ಎಚ್.ಜೆ.ನಾಗಮಣಿ ನಾಮ ಪತ್ರ ಸಲ್ಲಿಸಿದ್ದು, ಚುನಾವಣೆಯಲ್ಲಿ ಎಂ.ವಿ.ದೇವರಾಜುಗೆ ೧೧ ಮತ ಹಾಗೂ ಎಚ್.ಜೆ.ನಾಗಮಣಿರವರಿಗೆ ೫ ಮತ ಪಡೆದು ಪರಭಾವಗೊಂಡರು. ೧೧ ಮತ ಪಡೆದ ಎಂ.ವಿ.ದೇವರಾಜು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸಡ್ಲವಾರಹಳ್ಳಿ ಎನ್.ಮಂಜುಳ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆಯ ಅಧಿಕಾರಿಯಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಾಂಜಿನಪ್ಪ ಹಾಜರಿದ್ದರು.
ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಡಿ.ಎಸ್.ಎನ್.ರಾಜು, ಶ್ರೀನಾಥ್, ಬಚ್ಚನಹಳ್ಳಿ ನಾರಾಯಣಸ್ವಾಮಿ, ಡಿ.ಪಿ.ನಾಗರಾಜ್, ಆನಂದ್ ರೆಡ್ಡಿ, ಪ್ರಸನ್ನ, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ತನ್ವಿರ್, ದಿಬ್ಬೂರಹಳ್ಳಿ ಠಾಣೆಯ ಸಬ್ಬ್ ಇನ್ಸ್ಪೆಕ್ಟರ್ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -