ಶಿಡ್ಲಘಟ್ಟ ತಾಲ್ಲೂಕು ಒಕ್ಕಲಿಗರ ಯುವಸೇನೆ ಸಂಘದ ದ್ಯೇಯೋದ್ಧೇಶಗಳನ್ನು ಈಡೇರಿಸುವ ಸಲುವಾಗಿ ತಾಲ್ಲೂಕಿನ ಕ್ಷೇತ್ರ ವ್ಯಾಪ್ತಿಯಲ್ಲಿ ನಗರ, ಪಂಚಾಯಿತಿ ಹಾಗೂ ಗ್ರಾಮ ವ್ಯಾಪ್ತಿಯ ಮಟ್ಟದಲ್ಲಿ ಒಕ್ಕಲಿಗರ ಯುವಸೇನೆ ಸಂಘ ಸಮಿತಿಗಳನ್ನು ರಚಿಸಲು ಉದ್ದೇಶಿಸಿದೆ ಎಂದು ತಾಲ್ಲೂಕು ಒಕ್ಕಲಿಗರ ಯುವಸೇನೆ ಸಂಘದ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ ತಿಳಿಸಿದರು.
ತಾಲ್ಲೂಕಿನ ಈ ತಿಮ್ಮಸಂದ್ರ ಗ್ರಾಮದಲ್ಲಿ ಸೋಮವಾರ ಈ ತಿಮ್ಮಸಂದ್ರ ಪಂಚಾಯಿತಿ ವ್ಯಾಪ್ತಿಯ ಒಕ್ಕಲಿಗರ ಯುವಸೇನೆ ಸಂಘದ ಸಮಿತಿ ರಚಿಸಿ ಅವರು ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿ, ಶಿಕ್ಷಣ, ನೈರ್ಮಲ್ಯ, ಸಾಂಸ್ಕೃತಿಕ ಪರಂಪರೆ ಉಳಿಸುವಿಕೆ, ಜಾನಪದ ರಕ್ಷಣೆ, ಆರೋಗ್ಯ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಒಕ್ಕಲಿಗರ ಯುವಸೇನೆ ಸಂಘ ಸದಾ ಚಟುವಟಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
ಈ ತಿಮ್ಮಸಂದ್ರ ಪಂಚಾಯಿತಿ ವ್ಯಾಪ್ತಿಯ ಒಕ್ಕಲಿಗರ ಯುವಸೇನೆ ಸಂಘದ ಕಾರ್ಯಕಾರಿ ಸಮಿತಿ ಗೌರವಾಧ್ಯಕ್ಷ ಪಿ.ಶಿವಾರೆಡ್ಡಿ, ಅಧ್ಯಕ್ಷ ಮಂಜುನಾಥ, ಉಪಾಧ್ಯಕ್ಷ ಎಲ್.ಬಾಬು, ಕಾರ್ಯಾಧ್ಯಕ್ಷ ಎಸ್.ಆರ್.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಅಶ್ವತ್ಥರೆಡ್ಡಿ, ಖಜಾಂಚಿ ಟಿ.ಎನ್.ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಎಂ.ಆರ್.ಶ್ರೀನಿವಾಸರೆಡ್ಡಿ, ಕಾರ್ಯದರ್ಶಿ ಟಿ.ವಿ.ಮೋಹನ್, ಸದಸ್ಯರಾಗಿ ಎಲ್.ಆನಂದ್, ಎಸ್.ವಿ.ರಘುನಾಥ್ಕುಮಾರ್, ಜಯರಾಮರೆಡ್ಡಿ, ನಾರಾಯಣರೆಡ್ಡಿ, ಕೆ.ಸಿ.ವೆಂಕಟರಾಮರೆಡ್ಡಿ, ಚೌಡರೆಡ್ಡಿ, ಟಿ.ಸಿ.ಚೌಡರೆಡ್ಡಿ, ಎಂ.ಬೈರರೆಡ್ಡಿ, ಎಸ್.ವಿ. ಸಿದ್ದಿರೆಡ್ಡಿ, ಎಸ್.ಇ.ದೇವರಾಜು, ನಾರಾಯಣರೆಡ್ಡಿ, ಎನ್.ಕೇಶವರೆಡ್ಡಿ, ಎಚ್.ಎಲ್.ಭಾಸ್ಕರ್, ಆಂಜನೇಯರೆಡ್ಡಿ, ಎಂ.ಬಿ.ಬೈರಾರೆಡ್ಡಿ, ಮುನಿಶಾಮಿರೆಡ್ಡಿ, ಎಸ್.ಕೆ.ಸೋಮಶೇಖರ್ ಆಯ್ಕೆಯಾಗಿದ್ದಾರೆ.
- Advertisement -
- Advertisement -
- Advertisement -