ನಗರದ ಸಿದ್ದಾರ್ಥನಗರದ ಮಾನಸ ಆಸ್ಪತ್ರೆಯಲ್ಲಿ ಭಾನುವಾರ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಇ.ಸಿ.ಜಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದ ಡಿ.ವೈ.ಎಸ್.ಪಿ ಸಣ್ಣತಿಮ್ಮಪ್ಪ, ‘ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದೆ. ರಕ್ತದೊತ್ತಡ, ಮಧುಮೇಹ ಮುಂತಾದ ಖಾಯಿಲೆಗಳು ಒತ್ತಡದ ಜೀವನ ಹಾಗೂ ಕಲುಶಿತ ವಾತಾವರಣದ ಬಳುವಳಿಗಳಾಗಿದ್ದು, ಆರೋಗ್ಯ ತಪಾಸಣಾ ಶಿಬಿರದಲ್ಲಿ ಪೊಲೀಸರು ಕುಟುಂಬ ಸಮೇತ ಭಾಗವಹಿಸಿ, ಆರೋಗ್ಯವನ್ನು ಪರೀಕ್ಷಿಸಿಕೊಳ್ಳಿ’ ಎಂದು ಪೊಲೀಸರಿಗೆ ಕರೆ ನೀಡಿದರು.
ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಲ್.ಶ್ರೀನಿವಾಸಮೂರ್ತಿ, ಸಬ್ ಇನ್ಸ್ಪೆಕ್ಟರ್ ಪುರುಷೋತ್ತಮ್, ಡಾ.ಮೋಹನ್ ಭಾರ್ಗವ್, ಪೊಲೀಸ್ ಬಿಬ್ಬಂದಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -