Home News ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಚಿತ ಆರೋಗ್ಯ ತಪಾಸಣಾ ಶಿಬಿರ

0

ತಾಲ್ಲೂಕಿನ ಮೇಲೂರು ಗ್ರಾಮದ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ, ಕನ್ನಡ ರೈತ ಯುವಕ ಸಂಘ ಮತ್ತು ದ್ವಾರಕಾಮಯಿ ಫೌಂಡೇಷನ್ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನಿಂದ ಆಗಮಿಸಿದ್ದ ತಜ್ಞ ವೈದ್ಯರ ತಂಡ ಮಧುಮೇಹ, ರಕ್ತದೊತ್ತಡ, ಹೃದಯ ತಪಾಸಣೆ, ಚರ್ಮರೋಗ, ಕಿವಿ, ಮೂಗು, ಗಂಟಲು, ಸ್ತ್ರೀರೋಗ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಮಾಡಿದರು. ಮೇಲೂರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸುಮಾರು 600 ಮಂದಿ ಚಿಕಿತ್ಸೆ ಪಡೆದರು.
ಈ ಸಂದರ್ಭದಲ್ಲಿ ರೋಗಿಗಳಿಗೆ ಉಚಿತವಾಗಿ ಔಷಧಿ ಹಾಗೂ ಕಣ್ಣಿನ ತೊಂದರೆಯಿರುವವರಿಗೆ ಉಚಿತವಾಗಿ ಕನ್ನಡಕವನ್ನು ಸಹ ನೀಡಲಾಯಿತು.
ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಆರ್.ಎ.ಉಮೇಶ್, ವೈದ್ಯರಾದ ಡಾ.ರೇವಣ್ಣ, ಡಾ.ಬಾಬು ರಾವ್, ಡಾ.ರಾಜ್ಕುಮಾರ್, ಡಾ.ಉಷಾವಾಣಿಶ್ರೀ, ಡಾ.ರಾಜೇಶ್, ಕೆ.ರಘುರಾಮಯ್ಯ, ರಮಾನಂದಸಾಗರ, ಡಾ.ಕಿರಣ್ಕುಮಾರ್, ಡಾ.ಮಹಲಿಂಗಪ್ಪ, ದ್ವಾರಕಾಮಯಿ ಫೌಂಡೇಷನ್ ಅಧ್ಯಕ್ಷೆ ಸುಜಾತ, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ ಮತ್ತು ಕನ್ನಡ ರೈತ ಯುವಕ ಸಂಘದ ಸುಧೀರ್, ಸುದರ್ಶನ್, ಎಸ್.ಆರ್.ಶ್ರೀನಿವಾಸ್, ಧರ್ಮೇಂದ್ರ, ಶಿವಕುಮಾರ್, ರೂಪೇಶ್, ರಾಜೇಶ್, ಕೃಷ್ಣಮೂರ್ತಿ, ರಾಕೇಶ್, ಗೋಪಾಲ್, ಪ್ರಭಾಕರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.