25.1 C
Sidlaghatta
Friday, April 26, 2024

ಉಚಿತ ಕಣ್ಣಿನ ತಪಾಸಣಾ ಶಿಬಿರ

- Advertisement -
- Advertisement -

ನಿರಂತರ ಒತ್ತಡಗಳ ನಡುವೆ ಜೀವನ ಮಾಡುವಂತಹ ನಾಗರಿಕರು ಹಾಗೂ ಒತ್ತಡಗಳ ನಡುವೆ ವ್ಯಾಸಂಗ ಮಾಡುವಂತಹ ವಿದ್ಯಾರ್ಥಿಗಳು ಆಗಾಗ ಕಣ್ಣಿನ ತಪಾಸಣೆಗೆ ಒಳಗಾಗುವುದು ಸೂಕ್ತವೆಂದು ಎ.ಡಿ.ಡಿ. ಇಂಡಿಯಾ ಸಂಸ್ಥೆಯ ಡಾ.ಆನಂದ್ ಹೇಳಿದರು.
ನಗರದ ಬಿ.ಆರ್.ಸಿ.ಕೇಂದ್ರದಲ್ಲಿ ಎ.ಡಿ.ಡಿ. ಇಂಡಿಯಾ ಸಂಸ್ಥೆ ಹಾಗೂ ಸ್ವಾಮಿ ವಿವೇಕಾನಂದ ಅಂಗವಿಕಲರ ಒಕ್ಕೂಟದಿಂದ ಮಂಗಳವಾರ ಆಯೋಜನೆ ಮಾಡಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಮಾನವನ ದೇಹದಲ್ಲಿನ ಬಹುಮುಖ್ಯ ಅಂಗವಾಗಿರುವ ಕಣ್ಣಿನ ತಪಾಸಣೆಯು ಅಗತ್ಯವಾಗಿ ಮಾಡಿಸಿಕೊಳ್ಳಬೇಕು. ದೃಷ್ಟಿದೋಷ, ಕಣ್ಣಿನ ಪೊರೆ, ಕಣ್ಣಿನಲ್ಲಿ ನೀರು ಸೋರುವಿಕೆ, ಅಭ್ಯಾಸದ ಸಮಯದಲ್ಲಿ ದೃಷ್ಟಿ ಮಂದವಾಗುವುದು ಮುಂತಾದ ಸಮಸ್ಯೆಗಳ ನಿವಾರಣೆಗಾಗಿ ಆಗಾಗ ತಪಾಸಣೆಗೆ ಒಳಪಟ್ಟಾಗ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ತಪಾಸಣಾ ಶಿಬಿರದಲ್ಲಿ ನಾಗರಿಕರು, ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲಾಯಿತು. ಅಗತ್ಯವಿರುವವರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಣೆ ಮಾಡಲಾಯಿತು. ಶಸ್ತ್ರಚಿಕಿತ್ಸೆ ಅಗತ್ಯವಿರುವವರನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.
ಜಾನ್‌ಮುರೆ, ಕೃಷ್ಣಪ್ಪ, ರತ್ನ, ಉಮೇಶ್, ಬಿ.ಆರ್.ಸಿ.ರಮೇಶ್, ರಾಧ, ವಿವೇಕಾನಂದ ಅಂಗವಿಕಲರ ಒಕ್ಕೂಟದ ಸಂತೋಷ್, ಮುನಿರಾಜು, ನಾಗರತ್ನ, ಗಂಗಮ್ಮ, ಹಾಗೂ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!