ನಗರದ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.
ಆಂಧ್ರ ಹಾಗೂ ತಮಿಳುನಾಡಿನ ಗಡಿಭಾಗದಲ್ಲಿರುವ ನಾವುಗಳು ಮಾತೃಭಾಷೆಗಿಂತ ಹೆಚ್ಚು ತೆಲುಗು, ತಮಿಳು ಭಾಷೆ ಬಳಸುವುದರಿಂದ ಕನ್ನಡ ಭಾಷೆ ಅಳಿವಿನ ಅಂಚಿನಲ್ಲಿದೆ. ಹಾಗಾಗಿ ಪ್ರತಿಯೊಬ್ಬರೂ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ಭಾಷೆಯನ್ನು ಉಳಿಸಿ ಬೆಳಸಬೇಕಾಗಿದೆ ಎಂದರು.
ಶಿಬಿರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಕಸಾಪ ವತಿಯಿಂದ ಪ್ರಶಂಸನಾ ಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಉಲ್ಲೂರುಪೇಟೆ ಶಾಲೆಯ ಮುಖ್ಯಶಿಕ್ಷಕ ಎನ್.ಕೃಷ್ಣಮೂರ್ತಿ, ಕಸಾಪ ನಗರ ಘಟಕ ಅಧ್ಯಕ್ಷ ಸಿ.ಎನ್.ಮುನಿರಾಜು, ಶಿಕ್ಷಣ ಇಲಾಖೆಯ ಭಾಸ್ಕರಗೌಡ, ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ತರಬೇತಿ ಆಯುಕ್ತ ಪ್ರಕಾಶ್, ಮುನಿರಾಜು, ಅಕ್ಕಯ್ಯಮ್ಮ, ನಿತ್ಯಶ್ರೀ ಹಾಜರಿದ್ದರು.
- Advertisement -
- Advertisement -
- Advertisement -