ಸೌದೆಗಾಗಿ ಮರ ಕಡಿಯುವುದನ್ನು ತಪ್ಪಿಸಿ, ಪರಿಸರ ಉಳಿಸುವುದಲ್ಲದೆ ಆರೋಗ್ಯದ ಸುರಕ್ಷತೆಗೂ ಬಹು ಅನುಕೂಲಕರವಾದ ಉಜ್ವಲ ಯೋಜನೆಯ ಅಡುಗೆ ಅನಿಲ ಸಂಪರ್ಕವನ್ನು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಎ.ಎಂ.ತ್ಯಾಗರಾಜ್ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪೇಗೌಡನಹಳ್ಳಿ ಗ್ರಾಮದಲ್ಲಿ ಸೋಮವಾರ ಆರು ಮಂದಿ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ ವಿತರಿಸಿ ಅವರು ಮಾತನಾಡಿದರು.ಹೊಗೆರಹಿತ ಗ್ರಾಮ ನಿರ್ಮಾಣದ ಕನಸಿನೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಈಗಾಗಲೇ ಗ್ರಾಮದಲ್ಲಿ ಸುಮಾರು ೨೦ ಮಂದಿ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ವಿತರಿಸಲಾಗಿದೆ.
ಮುಂದಿನ ದಿನಗಳಲ್ಲಿ ಮತ್ತಷ್ಟು ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ನೀಡಲು ಈಗಾಗಲೇ ಅರ್ಜಿಗಳು ಸಲ್ಲಿಸಿದ್ದು ಹಂತ ಹಂತವಾಗಿ ಎಲ್ಲರಿಗೂ ಸಂಪರ್ಕ ಕೊಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನೇತ್ರಾವತಿ, ಉಮಾ ಹಾಜರಿದ್ದರು.