ಉತ್ತರ ಭಾರತದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡನೆ

- Advertisement -
- Advertisement -

ಉತ್ತರ ಭಾರತದಲ್ಲಿ ನಿರಂತರವಾಗಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗು ಹಲ್ಲೆಗಳನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಶನಿವಾರ ತಹಸೀಲ್ದಾರಿಗೆ ಮನವಿ ಪತ್ರ ಸಲ್ಲಿಸಿದರು.
ದೇಶದಾದ್ಯಂತ ಬಿಜೆಪಿ ಸರ್ಕಾರವಿರುವ ಬಹುತೇಕ ರಾಜ್ಯಗಳಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ, ಹಲ್ಲೆ, ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಗಳು ನಡೆಯುತ್ತಿವೆ. ಮಾಯಾವತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ದಯಾಶಂಕರ್ ಸಿಂಗ್ರನ್ನು ಕೂಡಲೇ ಬಂಧಿಸಿ ಗಡೀಪಾರು ಮಾಡಬೇಕು, ಗುಜರಾತಿನಲ್ಲಿರುವ ಬಿಜೆಪಿಯ ಗೋರಕ್ಷಕದಳವನ್ನು ನಿಷೇಧ ಮಾಡಬೇಕು ಹಾಗೂ ದೇಶದ ಜನಸಂಖ್ಯೆಗೆ ಅನುಗುಣವಾಗಿ ಪ್ರತ್ಯೇಕ ರಾಜ್ಯಗಳನ್ನು ದಲಿತರಿಗೆ ನೀಡಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕೆ.ಎಂ.ಮನೋರಮಾ ರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ.ದ.ಸಂ.ಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್, ತಾಲ್ಲೂಕು ಸಂಚಾಲಕ ದಡಂಘಟ್ಟ ತಿರುಮಲೇಶ್, ಸಂಘಟನಾ ಸಂಚಾಲಕ ಹಿತ್ತಲಹಳ್ಳಿ ದೇವರಾಜ್, ಯಣ್ಣಂಗೂರು ಸುಬ್ರಮಣಿ, ಬೈರಸಂದ್ರ ದೇವರಾಜ್, ದಿಬ್ಬೂರಹಳ್ಳಿ ಮಂಜುನಾಥ್, ಎಲ್.ಎನ್.ಮುನಿಕೃಷ್ಣ, ದಿಬ್ಬೂರಹಳ್ಳಿ ಚಿಕ್ಕನರಸಿಂಹಯ್ಯ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!