ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿ ಉಪನೋಂದಣಾಧಿಕಾರಿ ಸುಗಟೂರು ಗ್ರಾಮದ ಜಮೀನನ್ನು ನೋಂದಣಿ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಉಪನೋಂದಣಾಧಿಕಾರಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ ಮಾತನಾಡಿ, ಸುಗಟೂರು ಗ್ರಾಮದ ಎನ್.ಮುನೇಗೌಡ ಎಂಬುವವರ ಜಮೀನಿನಲ್ಲಿ ರೈತ ಕೃಷಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ಸರ್ವೆ ನಂಬರ್ ೯೦/೩ ರಲ್ಲಿ ೨.ಎಕರೆ ೫ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿ ನೋಂದಾಯಿಸಿಕೊಂಡಿದ್ದಾರೆ.
ಯಥಾಸ್ಥಿತಿಯಲ್ಲಿ ಮುಂದುವರೆಸಿಕೊಂಡು ಹೋಗುವಂತೆ ನ್ಯಾಯಾಲಯದಿಂದ ಆದೇಶ ನೀಡದ್ದರೂ ಕೂಡಾ ಆದೇಶವನ್ನು ಉಲ್ಲಂಘನೆ ಮಾಡಿ ನೋಂದಣಿ ಮಾಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ಮುಖಾಂತರ ಮನವಿ ಪತ್ರ ಸಲ್ಲಿಸಿದರು.
ರೈತಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಟಿ.ಕೆ.ಅರುಣ್ ಕುಮಾರರ್, ಕೋಟೆ ಚನ್ನೇಗೌಡ, ಎನ್.ನಾಗರಾಜ್, ಮುದುರಾಜ್, ಶಂಕರನಾರಾಯಣ ಹಾಜದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







