Home News ಎಂಜಿನಿಯರ್‌ಗಳ ದಿನಾಚರಣೆಯ ಅಂಗವಾಗಿ ಎಂಜಿನಿಯರ್‌ ಆಗಿರುವ ಶಾಲೆಯ ವಿದ್ಯಾರ್ಥಿಗೆ ಸನ್ಮಾನ

ಎಂಜಿನಿಯರ್‌ಗಳ ದಿನಾಚರಣೆಯ ಅಂಗವಾಗಿ ಎಂಜಿನಿಯರ್‌ ಆಗಿರುವ ಶಾಲೆಯ ವಿದ್ಯಾರ್ಥಿಗೆ ಸನ್ಮಾನ

0

ತಾಲ್ಲೂಕಿನ ಗುಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಎಂಜಿನಿಯರ್‌ಗಳ ದಿನಾಚರಣೆಯನ್ನು ವಿಶಿಷ್ಠವಾಗಿ ಆಚರಿಸಲಾಯಿತು.
ಗುಡಿಹಳ್ಳಿ ಗ್ರಾಮದಲ್ಲಿ ಹುಟ್ಟಿ ಅದೇ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಎಂಜಿನಿಯರ್‌ಗಳಾಗಿ ಉದ್ಯೋಗದಲ್ಲಿರುವ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಜಿ.ಸಿ.ರಾಘವೇಂದ್ರ ಮತ್ತು ಜಿ.ಎಲ್‌. ನಳಿನ ಅವರನ್ನು ಶಾಲಾ ಶಿಕ್ಷಕರು, ಎಸ್‌.ಡಿ.ಎಂ.ಸಿ ಸಮಿತಿ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸನ್ಮಾನಿಸಿದರು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಜಿ.ಸಿ.ರಾಘವೇಂದ್ರ, ತಾವು ಕಲಿತ ಶಾಲೆ ಮತ್ತು ಶಿಕ್ಷಕರ ಋಣವನ್ನು ತೀರಿಸಲಾಗದು. ನಮ್ಮಂತೆ ಇನ್ನೂ ಹೆಚ್ಚು ಮಂದಿ ಉನ್ನತ ಶಿಕ್ಷಣವನ್ನು ಪೂರೈಸಿ ಗ್ರಾಮಕ್ಕೆ ಮಾದರಿಯಾಗಲಿ, ಗ್ರಾಮದ ಏಳಿಗೆಗಾಗಿ ಶ್ರಮಿಸಲಿ. ನಮ್ಮ ಶಾಲೆಯ ಕೀರ್ತಿಯನ್ನು ಬೆಳಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.
‘ಪ್ರಸ್ತುತ ಜಿ.ಸಿ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರ್‌ ಆಗಿ, ಜಿ.ಎಲ್‌. ನಳಿನ ಅವರು ಚಿಂತಾಮಣಿಯಲ್ಲಿ ಸಹಾಯಕ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದು, ಮಕ್ಕಳು ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಇವರಿಂದ ಪ್ರೇರಣೆ ಪಡೆಯಬೇಕು’ ಎಂದು ಮುಖ್ಯ ಶಿಕ್ಷಕ ಶ್ರೀರಾಮಪ್ಪ ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿಯ ಸೊಣ್ಣಪ್ಪ, ಶಾಲಾ ಶಿಕ್ಷಕರಾದ ಎಂ.ಬಾಲಚಂದ್ರ, ಎಂ.ಪರಮೇಶ್ವರಪ್ಪ, ಎಂ.ಎನ್‌.ಲಕ್ಷ್ಮಿ, ಸಿಬ್ಬಂದಿಗಳಾದ ರತ್ನಮ್ಮ, ಜಯಲಕ್ಷ್ಮಮ್ಮ, ಭಾಗ್ಯಮ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!