ಎಚ್.ಡಿ.ಕುಮಾರಸ್ವಾಮಿಯವರನ್ನು ಮುಂದಿನ ಮುಖ್ಯಮಂತ್ರಿಗಳನ್ನಾಗಿ ಮಾಡುವುದೇ ಗುರಿ

- Advertisement -
- Advertisement -

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಂದಿನ ಮುಖ್ಯಮಂತ್ರಿಗಳನ್ನಾಗಿ ಮಾಡಲು ಕ್ಷೇತ್ರದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೂ ತೆರಳಿ ಎಚ್.ಡಿ.ಕುಮಾರಸ್ವಾಮಿ ಅವರಿಂದಾದ ಅಭಿವೃದ್ದಿ ಕೆಲಸಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆಯಲ್ಲಿ ಶುಕ್ರವಾರ ಕಸಬಾಹೋಬಳಿ ಹಾಗೂ ಜಂಗಮಕೋಟೆ ಹೋಬಳಿಯ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗು ಮನೆ ಮನೆ ಕುಮಾರಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಡವರ, ದೀನದಲಿತರ ಆಶಾಕಿರಣವಾಗಿದ್ದ ಎಚ್.ಡಿ.ಕುಮಾರಸ್ವಾ,ಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಮಾಡಿದ ಜನಪರ ಕಾರ್ಯಕ್ರಮಗಳು ಮತ್ತು ತಾವು ಶಾಸಕರಾಗಿ ಕಳೆದ ನಾಲ್ಕೂವರೆ ವರ್ಷದಲ್ಲಿ ಕ್ಷೇತ್ರದಲ್ಲಿ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮುಂದಿನ ಚುನಾವಣೆ ಎದುರಿಸೋಣ. ಮತ್ತೊಮ್ಮೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ಕಳೆದ ೨೦೧೩ ರ ಚುನಾವಣೆಯಲ್ಲಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದು. ಕ್ಷೇತ್ರದ ಜನರಿಗೆ ನೀಡಿದ್ದ ಆಶ್ವಾಸನೆಯಂತೆ ನಗರದಲ್ಲಿಯೇ ವಾಸ್ತವ್ಯ ಹೂಡಿದ್ದೇನೆ. ಪ್ರತಿನಿತ್ಯ ಸಾಮಾನ್ಯ ವ್ಯಕ್ತಿಯ ಜೊತೆಯೊಲ್ಲಿಯೂ ಸಂಪರ್ಕದಲ್ಲಿರುವ ಮೂಲಕ ಕ್ಷೇತ್ರದ ಮನೆ ಮಗನಾಗಿ ಸೇವೆ ಸಲ್ಲಿಸಿದ್ದೇನೆ ಎಂದರು.

ಜಂಗಮಕೋಟೆಯಲ್ಲಿ ಶುಕ್ರವಾರ ಕಸಬಾಹೋಬಳಿ ಹಾಗೂ ಜಂಗಮಕೋಟೆ ಹೋಬಳಿಯ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಮತ್ತು ಮನೆ ಮನೆ ಕುಮಾರಣ್ಣ ಕಾರ್ಯಕ್ರಮದಲ್ಲಿ ಮನೆ ಮನೆ ಕುಮಾರಣ್ಣ ಕರಪತ್ರವನ್ನು ಗಣ್ಯರು ಬಿಡುಗಡೆಗೊಳಿಸಿದರು

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ ಮಾತನಾಡಿ, ಸರಳ, ಸಜ್ಜನ ವ್ಯಕ್ತಿತ್ವದಿಂದ ಹೆಸರಾಗಿರುವ ಶಾಸಕ ಎಂ.ರಾಜಣ್ಣ ನುಡಿದಂತೆ ನಡೆದಿದ್ದು ಪ್ರತಿಯೊಬ್ಬ ಸಾಮಾನ್ಯನಿಗೂ ಹತ್ತಿರವಾಗಿದ್ದಾರೆ. ಕಳೆದ ನಾಲ್ಕೂವರೆ ವರ್ಷದಲ್ಲಿ ಕ್ಷೇತ್ರದಾಧ್ಯಂತ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಕೆಎಸ್‌ಆರ್‌ಟಿಸಿ ಡಿಪೋ, ಅಗ್ನಿಶಾಮಕದಳ, ಐಟಿಐ ಕಾಲೇಜು ಮತ್ತಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.
ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಯಾರಿಗೆ ಸಿಗಬಹುದು ಎಂಬ ಆತಂಕ ಬಹುತೇಕ ಜೆಡಿಎಸ್ ಕಾರ್ಯಕರ್ತರಲ್ಲಿರಬಹುದು. ಪಕ್ಷದಲ್ಲಿರುವ ಆಂತರಿಕ ಭಿನ್ನಮತವನ್ನು ವರಿಷ್ಠರು ಬಗೆಹರಿಸಲಿದ್ದು ಯಾವುದೇ ಕಾರಣಕ್ಕೂ ಕಾರ್ಯಕರ್ತರು ಗೊಂದಲ ಪಡುವುದು ಬೇಡ. ಮುಂಬರುವ ಚುನಾವಣೆಯಲ್ಲಿಯೂ ರಾಜಣ್ಣನವರೇ ಕ್ಷೇತ್ರದ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ. ಹಾಗಾಗಿ ಇಂದಿನಿಂದಲೇ ಜೆಡಿಎಸ್ ಕಾರ್ಯಕರ್ತರೂ ಸೇರಿದಂತೆ ಮುಖಂಡರು ಕ್ಷೇತ್ರದ ಮನೆ ಮನೆಗೂ ತೆರಳಿ ಪ್ರಾದೇಶಿಕ ಪಕ್ಷದ ಅಗತ್ಯತೆ ಹಾಗು ಅನಿವಾರ್ಯದ ಬಗ್ಗೆ ಜನರಿಗೆ ಮಾಹಿತಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಂ.ಜಯರಾಮರೆಡ್ಡಿ, ನಗರಸಭಾ ಸದಸ್ಯ ಅಫ್ಸರ್‌ಪಾಷ, ಮುಖಂಡರಾದ ನಜೀರ್‌ಸಾಬ್, ಮಳಮಾಚನಹಳ್ಳಿ ಬೈರೇಗೌಡ, ಎಚ್‌ಕ್ರಾಸ್ ರವಿ, ಕೆ.ಮಂಜುನಾಥ್, ಕೆ.ಎಸ್.ಕನಕಪ್ರಸಾದ್, ರೆಹಮತ್ತುಲ್ಲಾ, ಲಕ್ಷ್ಮಿನಾರಾಯಣ, ಮಳಮಾಚನಹಳ್ಳಿ ರವಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!