ನಗರದ ಒಂದನೇ ನಗರ್ತಪೇಟೆಯ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ನವೆಂಬರ್ ೨೫ರ ಶನಿವಾರ ತಾಲ್ಲೂಕು ಸರ್ಕಾರಿ ಎನ್ಪಿಎಸ್ ನೌಕರರ ಜಾಗೃತಿ ಸಮಾವೇಶ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ ೧೧ ಗಂಟೆಗೆ ವಿಚಾರ ಸಂಕಿರಣ, ಸಮಾವೇಶವನ್ನು ಶಾಸಕ ಎಂ.ರಾಜಣ್ಣ ಉದ್ಘಾಟಿಸಲಿದ್ದು ಸರ್ಕಾರಿ ಎನ್ಪಿಎಸ್ ನೌಕರರ ತಾಲ್ಲೂಕು ಅಧ್ಯಕ್ಷ ವಿ.ಎನ್.ಗಜೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾಮುನಿರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ನಗರಸಭೆಯ ಪ್ರಭಾರ ಅಧ್ಯಕ್ಷೆ ಪ್ರಭಾವತಿ ಸುರೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಂಕ್ ಮುನಿಯಪ್ಪ, ಸತೀಶ್, ಡಾ.ಜಯರಾಮರೆಡ್ಡಿ, ತನುಜರಘು, ಎನ್ಪಿಎಸ್ ನೌಕರರ ರಾಜ್ಯಾಧ್ಯಕ್ಷ ಶಾಂತರಾಮ, ಗೌರವ ಸಲಹೆಗಾರರಾದ ನಾಗನಗೌಡ, ಉಪಾಧ್ಯಕ್ಷ ಸಿದ್ದಪ್ಪಸಂಗಪ್ಪನವರ ಭಾಗವಹಿಸಲಿದ್ದಾರೆ.
- Advertisement -
- Advertisement -
- Advertisement -
- Advertisement -