ಪಟ್ಟಣದ ಎಬೆನೆಜರ್ ಮಾರ್ತೋಮ ಚರ್ಚ್ನಲ್ಲಿ ಗುರುವಾರ ಕ್ರಿಸ್ಮಸ್ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಮೇಣದ ಬತ್ತಿಗಳನ್ನು ಬೆಳಗುವ ಮೂಲಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಜಾತಿ ಬೇಧವಿಲ್ಲದೆ ನೂರಾರು ಮಂದಿ ಚರ್ಚ್ಗೆ ಆಗಮಿಸಿ ಮೇಣದ ಬತ್ತಿಗಳನ್ನು ಬೆಳಗಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಚರ್ಚ್ನಲ್ಲಿ ಕೇಕನ್ನು ಹಂಚಿದರು.
‘ವರ್ಷಕ್ಕೊಮ್ಮೆ ಬರುವ ಏಸುಕ್ರಿಸ್ತನ ಜಯಂತಿಯನ್ನು ಸಡಗರದಿಂದ, ಭಕ್ತಿ ಭಾವದಿಂದ ಕ್ರಿಶ್ಚಿಯನ್ನರು ಆಚರಿಸುತ್ತಾರೆ. ಕ್ರೈಸ್ತರಿಗೆ ಪವಿತ್ರ ಹಬ್ಬವಾಗಿರುವ ಕ್ರಿಸ್ಮಸ್ ಅಥವಾ ಕ್ರಿಸ್ತ ಜಯಂತಿಯನ್ನು ಪ್ರತಿವರ್ಷ ವಿಶ್ವದಾಧ್ಯಂತ ಸಂಭ್ರಮ ಸಡಗರಗಳಿಂದ ಆಚರಣೆ ಮಾಡಲಾಗುತ್ತದೆ. ಡಿಸೆಂಬರ್9 ರಿಂದ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ತಾಲ್ಲೂಕಿನ ಎಲ್ಲಾ ಚರ್ಚುಗಳಲ್ಲಿ ವಿವಿಧ ರೀತಿಗಳಲ್ಲಿ ಆಚರಣೆ ಮಾಡುತ್ತಾ ಬಂದಿದ್ದು, ಏಸುವಿನ ಸಂದೇಶವನ್ನು ಜನರಿಗೆ ತಿಳಿಸಲಾಗುತ್ತಿದೆ.
ಕ್ರಿಸ್ಮಸ್ ಸಮಯದಲ್ಲಿ ಕ್ರೈಸ್ತ ಕುಟುಂಬಗಳ ಮೇಲೆ ನಕ್ಷತ್ರಗಳನ್ನು ಕಟ್ಟುವುದು ವಾಡಿಕೆ. ಕ್ರೈಸ್ತರು ನಮಗಾಗಿ ಜನಿಸಿದ ರಕ್ಷಕನು ಏಸು ಎಂಬ ನಂಬಿಕೆಯಿಂದ ಕ್ರಿಸ್ಮಸ್ ಹಬ್ಬವನ್ನು ಶ್ರದ್ಧಾಭಕ್ತಿಗಳಿಂದ ತಮ್ಮ ಮನೆಗಳನ್ನು ವಿವಿಧ ಬಣ್ಣದ ಕಾಗದಗಳಿಂದ ಅಲಂಕಾರ ಮಾಡಿ, ಸ್ನೇಹಿತರು, ಬಂಧುಗಳು, ಸೇರಿದಂತೆ ಎಲ್ಲರೊಂದಿಗೂ ಶುಭಾಶಯಗಳನ್ನು ಹಂಚಿಕೊಂಡು ಎಲ್ಲರ ಒಳಿತಾಗಿ ಪ್ರಾರ್ಥನೆ ಮಾಡುವುದು ವಾಡಿಕೆಯಾಗಿದೆ. ಚರ್ಚ್ನಲ್ಲಿಯೂ ಏಸುವಿನ ಜನ್ಮವೃತ್ತಾಂತವನ್ನು ಪ್ರತಿನಿಧಿಸುವಂತೆ ಪ್ರತಿಕೃತಿಗಳ ಮೂಲಕ ಅಲಂಕಾರವನ್ನು ಮಾಡಿದ್ದೇವೆ’ ಎಂದು ಎಬೆನೆಜರ್ ಮಾರ್ತೋಮ ಚರ್ಚ್ನ ಫಾದರ್ ರೆನಿನ್ ವರ್ಗೀಸ್ ತಿಳಿಸಿದರು.
- Advertisement -
- Advertisement -
- Advertisement -
- Advertisement -