ಹೊಟ್ಟೆಪಾಡಿಗಾಗಿ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದ ತಾಲ್ಲೂಕಿನ ಆಟೋ ಚಾಲರಿಗೆ ಲಾಕ್ ಡೌನ್ ನಿಂದಾಗಿ ಬಹಳ ತೊಂದರೆಯಾಗಿದೆ. ಇದನ್ನು ಮನಗಂಡು ನಮ್ಮ ಟ್ರಸ್ಟ್ ನಿಂದ ತಾಲ್ಲೂಕಿನ ಆಟೋ ಚಾಲಕರಿಗೆ ದಿನಸಿ ಕಿಟ್ ಗಳನ್ನು ನೀಡುತ್ತಿದ್ದೇವೆ ಎಂದು ಎಸ್. ಎನ್. ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಪುಟ್ಟು ತಿಳಿಸಿದರು.
ದಿಬ್ಬೂರಹಳ್ಳಿ ರಸ್ತೆಯಲ್ಲಿ ಇರುವ ಮೈದಾನದಲ್ಲಿ ನಗರ ಸೇರಿದಂತೆ ತಾಲ್ಲೂಕಿನ ಜಂಗಮಕೋಟೆ, ದಿಬ್ಬೂರಹಳ್ಳಿ ಸಾದಲಿಯ ಸುಮಾರು ಐದುನೂರಕ್ಕೂ ಹೆಚ್ಚು ಮಂದಿ ಆಟೋ ಚಾಲಕರಿಗೆ ದಿನಸಿ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.
ಸರ್ಕಾರ ಆಟೋ ಚಾಲಕರಿಗೆ ಹಲವು ಪ್ಯಾಕೇಜುಗಳನ್ನು ಜಾರಿ ಮಾಡುತ್ತಿದೆ. ಆದರೂ ಹಲವರು ಅದರಿಂದ ವಂಚಿತರಾಗುತ್ತಿದ್ದಾರೆ. ಶಿಡ್ಲಘಟ್ಟ ಹೆಚ್ಚಿನ ಗ್ರಾಮೀಣ ಪ್ರದೇಶ ಹೊಂದಿರುವುದರಿಂದ ಬಡವರಿಗೆ ಮತ್ತು ಅಗತ್ಯವುಳ್ಳವರಿಗೆ ದಿನಸಿ ಕಿಟ್ಗಳನ್ನು ನೀಡುತ್ತಿದ್ದೇವೆ.
ಸರ್ಕಾರ ಲಾಕ್ ಡೌನ್ ಅನ್ನು ಮತ್ತಷ್ಟು ಸಡಿಲಗೊಳಿಸಿದೆ ಹಾಗಂತ ನಾವು ಇಚ್ಛಾನುಸಾರ ಹೊರಗಡೆ ಓಡಾಡಬಾರದು. ಮಾಸ್ಕ್ ಹಾಗೂ ಸ್ಯಾನಿಟೈಸರ್ ಅನ್ನು ಕಡ್ಡಾಯವಾಗಿ ಬಳಸಬೇಕು. ನಮ್ಮ ಅಕ್ಕ ಪಕ್ಕದವರು ಮಾಸ್ಕ್ ಧರಿಸದೆ ಹೊರಗಡೆ ಓಡಾಡುತ್ತಿದ್ದಾರೆ ಅವರಿಗೆ ತಿಳಿ ಹೇಳಬೇಕೆಂದರು.
ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಅಪ್ಪು, ಎಸ್ ಎನ್ ಕ್ರಿಯಾ ಟ್ರಸ್ಟ್ ಸದಸ್ಯರಾದ ಆನೂರು ದೇವರಾಜ್, ವಿಶ್ವನಾಥ್, ಮಳಮಾಚನಹಳ್ಳಿ ಮುನಿರಾಜು, ರಮೇಶ್, ತಾದುರು ಮಹೇಶ್, ಸುರೇಶ್, ಜಂಗಮಕೋಟೆ ಬಾಬು, ವಿಜಯ್ ಕುಮಾರ್, ನಾರಾಯಣ ಸ್ವಾಮಿ, ಸುಬ್ರಮಣಿ, ಮುನಿರಾಜು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







