ಒಂದು ಲಕ್ಷ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

- Advertisement -
- Advertisement -

ವಿಶ್ವ ಪರಿಸರ ದಿನದ ಅಂಗವಾಗಿ ನಗರದಾದ್ಯಂತ ಸುಮಾರು ಒಂದು ಲಕ್ಷ ವಿವಿಧ ಸಸಿಗಳನ್ನು ನೆಡುವ ಯೋಜನೆಗೆ ತಾಲ್ಲೂಕು ಆಡಳಿತ ಜೂನ್ 5 ರ ಮಂಗಳವಾರ ಚಾಲನೆ ನೀಡಲಿದೆ ಎಂದು ತಹಸೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ನಗರದ ರಸ್ತೆಯ ಇಕ್ಕೆಲಗಳೂ, ಸ್ಮಶಾನ, ಉದ್ಯಾನವನ, ಶಾಲಾ ಆವರಣ ಸೇರಿದಂತೆ ಸರ್ಕಾರಿ ಜಾಗಗಳಲ್ಲಿ ಸಸಿಗಳನ್ನು ನೆಡಲು ಉದ್ದೇಶಿಸಲಾಗಿದ್ದು ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.
ಶಾಲಾ, ಕಾಲೇಜು ಆವರಣಗಳಲ್ಲಿ ಕಡ್ಡಾಯವಾಗಿ ಸಸಿ ನೆಡಲು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದು ಶಾಲಾ ಕಾಲೇಜುಗಳ ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳನ್ನು ಈ ಕಾರ್ಯದಲ್ಲಿ ಹೆಚ್ಚಾಗಿ ಬಳಸಿಕೊಂಡು ನಗರದಲ್ಲಿ ಲಕ್ಷ ಸಸಿ ನೆಡುವ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು.
ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ಮಾತನಾಡಿ, ನಗರವನ್ನು ಧೂಳು ಮುಕ್ತವನ್ನಾಗಿಸುವ ಉದ್ದೇಶದಿಂದ ಭಾನುವಾರದಿಂದಲೇ ನಗರದಾದ್ಯಂತ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಇನ್ನು ವಿಶ್ವ ಪರಿಸರ ದಿನದ ಅಂಗವಾಗಿ ಅರಣ್ಯ ಇಲಾಖೆ ಹಾಗೂ ನಗರಸಭೆ ವತಿಯಿಂದ ಲಕ್ಷ ಗಿಡ ನೆಡುವ ಅಭಿಯಾನದಲ್ಲಿ ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಳ್ಳುತ್ತಿವೆ. ಈಗಾಗಲೇ ಒಂದು ಲಕ್ಷ ಸಸಿಗಳ ಲಭ್ಯತೆಯಿದ್ದು ಸಸಿಗಳನ್ನು ನೆಡುವುದೂ, ಅದನ್ನು ಸಂರಕ್ಷಿಸಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ನಗರಸಭೆ ಹಾಗೂ ಅರಣ್ಯ ಇಲಾಖೆ ಮಾಡಲಿದೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು, ಸಿಡಿಪಿಓ ಲಕ್ಮಿದೇವಮ್ಮ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಅನಸೂಯದೇವಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!