22.1 C
Sidlaghatta
Tuesday, October 28, 2025

ಒಕ್ಕಲಿಗರ ಯುವಸೇನೆಯಿಂದ ಬೈಕ್ ರ್ಯಾಲಿ

- Advertisement -
- Advertisement -

ಶಾಶ್ವತ ನೀರಾವರಿ ಹೋರಾಟ ಕುರಿತು ಜನಜಾಗೃತಿ ಮೂಡಿಸಲು ನಗರದಲ್ಲಿ ಬುಧವಾರ ಒಕ್ಕಲಿಗರ ಯುವಸೇನೆಯಿಂದ ಬೈಕ್ ರ್ಯಾಲಿ ನಡೆಸಲಾಯಿತು.
ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾರ್ಚ್ ೧೩ರಂದು ನಡೆಯುವ ರೈತ ಮಕ್ಕಳ ಬೃಹತ್ ಸಮಾವೇಶ ಹಾಗೂ ಈಗಾಗಲೆ ಚಿಂತಾಮಣಿ ನಗರದಲ್ಲಿ ನಡೆಯುತ್ತಿರುವ ಅರ್ನಿಷ್ಟ ಕಾಲದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಹಾಗೂ ಅರಿವು ಮೂಡಿಸುವ ಸಲುವಾಗಿ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಒಕ್ಕಲಿಗರ ಯುವ ಸೇನೆಯ ತಾಲ್ಲೂಕು ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ ತಿಳಿಸಿದರು.
ಬಯಲು ಸೀಮೆಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯನವರ ಪರಿಕಲ್ಪನೆಯ ಶಾಶ್ವತ ನೀರಾವರಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಬೈಕ್ ರ್ಯಾಲಿ ನಡೆಸಿದ್ದೇವೆ. ನಗರದ ಪ್ರವಾಸಿ ಮಂದಿರದಿಂದ ಬೈಕ್ ರ್ಯಾಲಿಯನ್ನು ಆರಂಭಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನೀರಾವರಿ ಹೋರಾಟ ಕುರಿತು ಜಾಗೃತಿ ಮೂಡಿಸುತ್ತಾ ಚಿಂತಾಮಣಿಯಲ್ಲಿ ನಡೆಯುತ್ತಿರುವ ಅರ್ನಿಷ್ಟ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತೇವೆ ಎಂದು ಅವರು ಹೇಳಿದರು.
ಅಪ್ಪೇಗೌಡನಹಳ್ಳಿ ತ್ಯಾಗರಾಜ್, ಜಿ.ಶಶಿಕುಮಾರ್, ಸಿ.ವಿ.ಮುನಿರಾಜು, ಪುರುಷೋತ್ತಮ, ಪ್ರತಾಪ್, ಪ್ರಸನ್ನ, ಶ್ರೀನಿವಾಸ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!