19.1 C
Sidlaghatta
Tuesday, January 13, 2026

ಓದಿನ ಅಭಿರುಚಿಯನ್ನು ಪ್ರೇರೇಪಿಸುವುದು ಕ.ಸಾ.ಪ ಉದ್ದೇಶ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಮುಖ್ಯ ಉದ್ದೇಶಗಳಲ್ಲಿ ಓದಿನ ಅಭಿರುಚಿಯನ್ನು ಪ್ರೇರೇಪಿಸುವುದಾಗಿದೆ ಎಂದು ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಶಾಲೆಗೊಂದು ಕನ್ನಡ ಕಾರ್ಯಕ್ರಮ – ಕಲಿಯುವ ಕೈಗೆ ಓದುವ ಪುಸ್ತಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಭಾಷೆ, ಸಾಹಿತ್ಯ, ಕಲೆ, ಜಾನಪದ, ಸಂಸ್ಕೃತಿಗಳ ಸಂವರ್ಧನೆ ಹಾಗೂ ಸಂರಕ್ಷಣೆಯ ಮಹದಾಶಯದೊಂದಿಗೆ ೧೯೧೫ರಲ್ಲಿ ಹುಟ್ಟಿಕೊಂಡ ‘ಕನ್ನಡ ಸಾಹಿತ್ಯ ಪರಿಷತ್’ಗೆ ಇದೀಗ ನೂರೊಂದರ ಸಂಭ್ರಮ. ಈ ಸವಿನೆನಪಿಗಾಗಿ ತಾಲ್ಲೂಕಿನ 101 ಶಾಲೆಗಳಲ್ಲಿ ‘ಕಲಿಯುವ ಕೈಗೆ ಓದುವ ಪುಸ್ತಕ’ ಕಾರ್ಯಕ್ರಮವನ್ನು ತಾಲ್ಲೂಕು ಕ.ಸಾ.ಪ ವತಿಯಿಂದ ನಡೆಸಲಾಗುತ್ತಿದೆ. ಮಕ್ಕಳಲ್ಲಿ ಓದಿನ ಅಭಿರುಚಿ ಬೆಳೆಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶ ಎಂದರು.
ಕನ್ನಡ ಭಾಷೆಯ ಸೊಗಸು, ಬೆಳವಣಿಗೆ, ಸಾಹಿತ್ಯ ಪ್ರಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಹುಟ್ಟು ಬೆಳವಣಿಗೆ, ಉದ್ದೇಶಗಳ ಕುರಿತಂತೆ ಅವರು ವಿವರಿಸಿದರು.
‘ನನ್ನ ಮೆಚ್ಚಿನ ಪುಸ್ತಕ’ ಎಂಬ ವಿಷಯವಾಗಿ ತಾವು ಓದಿದ ಪುಸ್ತಕದ ಬಗ್ಗೆ ಭಾಷಣ ಮಾಡಿ ವಿಜೇತರಾದ ಆರನೇ ತರಗತಿಯ ಲೋಕೇಶ್, ಏಳನೇ ತರಗತಿಯ ದೀಕ್ಷ ಮತ್ತು ಮಾಧುರ್ಯ ಅವರಿಗೆ ಪುಸ್ತಕ ಮತ್ತು ಪ್ರಮಾಣಪತ್ರವನ್ನು ಕ.ಸಾ.ಪ ವತಿಯಿಂದ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಕ.ಸಾ.ಪ ವತಿಯಿಂದ ಶಾಲೆಯ ಗ್ರಂಥಾಲಯಕ್ಕೆ ‘ಶಾಮಂತಿ’ ಮತ್ತು ‘ಕನ್ನಡ ರತ್ನಕೋಶ’ವನ್ನು ನೀಡಲಾಯಿತು.
ಶಿಕ್ಷಕರಾದ ಎಲ್.ನಾಗಭೂಷಣ್, ರಾಮಕೃಷ್ಣಪ್ಪ, ಗಂಗಾಧರಪ್ಪ, ವರಲಕ್ಷ್ಮಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!