18.1 C
Sidlaghatta
Saturday, December 27, 2025

ಓದಿನ ಅರಮನೆಯಲ್ಲಿ ಪುಸ್ತಕ ಪರಿಚಯ

- Advertisement -
- Advertisement -

ಕನ್ನಡ ಸಾರಸ್ವತ ಪರಿಚಾರಿಕೆ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ ಸಹಯೋಗದೊಂದಿಗೆ ನಗರ ಗ್ರಂಥಾಲಯದಲ್ಲಿ ಜನವರಿ 14 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ‘ಓದಿನ ಅರಮನೆಯಲ್ಲಿ ಪುಸ್ತಕ ಪರಿಚಯ’ – 7 ನೇ ತಿಂಗಳ ಕಾರ್ಯಕ್ರಮ ಆಯೋಜಿಸಲಾಗಿದೆ.
ತಾಲ್ಲೂಕಿನ ಸುಂಡ್ರಹಳ್ಳಿಯ ಎನ್. ಶ್ರೀನಿವಾಸಮೂರ್ತಿ ಅವರು ತಮ್ಮ ಕೃತಿಗಳಾದ ‘ಕಡಲು ಕೂಡುವ ಹನಿಗಳು’ ಎಂಬ ಕವನ ಸಂಕಲನ ಮತ್ತು ‘ಸೆಲ್ಪೀ ವಿಥ್ ವಿಕ್ಟರಿ’ ಪುಸ್ತಕದ ಬಗ್ಗೆ ಮಾತಾಡಿ ತಮ್ಮ ಸಾಹಿತ್ಯದ ಅನುಭವಗಳನ್ನು ಪುಸ್ತಕ ಪ್ರೇಮಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.
ವಿಜಯಪುರದ ಇನ್ಸ್ಪೈರ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಎನ್. ಶ್ರೀನಿವಾಸಮೂರ್ತಿ ಅವರು ವ್ಯಕ್ತಿತ್ವ ವಿಕಸನ ತರಭೇತಿ ತರಗತಿಗಳನ್ನು ನಡೆಸುತ್ತಾರೆ. ವಿವಿಧ ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುತ್ತಾರೆ. ಹಂಬು, ಮುಗುಳು, ಕಡಲು ಕೂಡುವ ಹನಿಗಳು ಎಂಬ ಕವನಸಂಕಲನಗಳನ್ನು, ನಾಗರೀಕ ಪ್ರಜ್ಞೆ, ನಡತೆಗೊಂದು ಮುನ್ನುಡಿ, ಗೆಲುವಿನ ರಹಸ್ಯ, ಸೆಲ್ಪೀ ವಿಥ್ ವಿಕ್ಟರಿ, ವಿಧಿಯ ಬೆನ್ನೇರಿ ಎಂಬ ವ್ಯಕ್ತಿತ್ವ ವಿಕಸನ ಪುಸ್ತಕಗಳನ್ನು ಬರೆದಿದ್ದಾರೆ ಎಂದು ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದ್ದಾರೆ.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!