ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪತಹಶೀಲ್ದಾರ್ ಹಾಗೂ ಶಿರಸ್ತೆದಾರರ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸೇರ್ಪಡೆಗೊಳಿಸಬಾರದು ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಕಪ್ಪುಪಟ್ಟಿಯನ್ನು ಧರಿಸಿಕೊಂಡು ಮೌನಮೆರವಣಿಗೆ ನಡೆಸಿದರು.
ನಗರದ ಪ್ರವಾಸಿಮಂದಿರದಿಂದ ಮೆರವಣಿಗೆಯ ಮೂಲಕ ಕೋಟೆ ವೃತ್ತದ ವರೆಗೂ ಮೌನ ಮೆರವಣಿಗೆ ನಡೆಸಿದ ನಂತರ ತಹಶೀಲ್ದಾರ್ ಕೆ.ಎಂ.ಮನೋರಮಾ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು.
ಕಂದಾಯ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನಾಗರಿಕರಿಗೆ ತೊಂದರೆ ಬಾರದಂತೆ, ನಿಗದಿತ ಸಮಯದಲ್ಲಿ ಜನರ ಕೆಲಸ ಕಾರ್ಯಗಳನ್ನು ಮಾಡಿಕೊಡುವ ಕೆಲಸದಲ್ಲಿ ನಿರತರಾಗಿರುವ ಅಧಿಕಾರಿಗಳ ಸ್ಥಾನಗಳಲ್ಲಿ ಸರ್ಕಾರ ಪಂಚಾಯತ್ರಾಜ್ ಇಲಾಖೆಯಲ್ಲಿನ ಅಧಿಕಾರಿಗಳನ್ನು ವೀಲಿನಗೊಳಿಸಲು ನಿರ್ಧರಿಸಿದೆ. ಇದರಿಂದ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು, ಹಾಗೂ ಇಲಾಖೆಯಲ್ಲಿನ ಇತರೆ ಅಧಿಕಾರಿಗಳ ಮುಂಬಡ್ತಿಗಳಿಗೆ ತೊಡಕಾಗಲಿದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಡಬೇಕು. ಒಂದು ವೇಳೆ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಡದಿದ್ದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ.ಗುರುರಾಜ್ರಾವ್ ಎಚ್ಚರಿಕೆ ನೀಡಿದರು.
ಗ್ರೇಡ್-೨ ತಹಶೀಲ್ದಾರ್ ವಾಸುದೇವಮೂರ್ತಿ, ಉಪತಹಶೀಲ್ದಾರ್ ಮುನಿಕೃಷ್ಣಪ್ಪ, ಶಿರಸ್ತೆದಾರ್ ನರೇಂದ್ರಬಾಬು, ಲಕ್ಷ್ಮೀಕಾಂತಮ್ಮ, ಚುನಾವಣಾ ಶಿರಸ್ತೆದಾರ್ ಲಕ್ಷ್ಮೀನಾರಾಯಣ, ಜಂಗಮಕೋಟೆ ಹೋಬಳಿ ರಾಜಸ್ವ ನಿರೀಕ್ಷಕ ಮೋಹನ್, ವೆಂಕಟಲಕ್ಷ್ಮಮ್ಮ, ಗ್ರಾಮ ಲೆಕ್ಕಾಧಿಕಾರಿಗಳಾದ ಆನಂದ್, ನಾಗರಾಜ್, ಚಂದ್ರಮ್ಮ, ಅಕ್ಷತಾ, ಭವ್ಯ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -







