ತಾಲ್ಲೂಕಿನ ಕದಿರಿನಾಯಕನಹಳ್ಳಿ ಗ್ರಾಮದಲ್ಲಿ ಗುರುವಾರ ವಿದ್ಯುತ್ ಹರಿದ ಕಾರಣ ಕಂಬದಿಂದ ಲೈನ್ಮನ್ ಕೆಳಗೆ ಬಿದ್ದು ತೀವ್ರವಾಗಿ ಪೆಟ್ಟಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಕದಿರಿನಾಯಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲು ಹತ್ತಿದ್ದ ಶಂಕರ್(25) ವಿದ್ಯುತ್ ಶಾಕ್ ಹೊಡೆದ ಪರಿಣಾಮ ಕೆಳಗೆ ಬಿದ್ದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಶಂಕರ್ ಅನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ವೈ.ಹುಣಸೇನಹಳ್ಳಿ ವಿದ್ಯುತ್ ಸ್ಟೇಷನ್ನಲ್ಲಿ ದೀಪಗಳನ್ನು ಅಳವಡಿಸುವ ವಿಷಯ ತಿಳಿಸಿ ಎಲ್.ಸಿ ಪಡೆದಿದ್ದರೂ ವಿದ್ಯುತ್ ಹರಿದ ಬಗ್ಗೆ ಬೆಸ್ಕಾಂ ಎಇಇ ಪರಮೇಶ್ವರ್ ಅವರನ್ನು ಕೇಳಿದಾಗ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -