22.1 C
Sidlaghatta
Wednesday, January 14, 2026

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ

- Advertisement -
- Advertisement -

ಕಟ್ಟಡ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮತ್ತು ಮೇಸ್ತ್ರಿಗಳಿಗೆ ಗುರುತಿನ ಚೀಟಿ ವಿತರಿಸುವ ಮೂಲಕ ಅವರಿಗೂ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನಾಗಿಸುವ ಪ್ರಯತ್ನ ನಡೆಸಿದ್ದೇವೆ ಎಂದು ಎ.ಸಿ.ಸಿ ಸಿಮೆಂಟ್ ಕಂಪೆನಿಯ ಅಧಿಕಾರಿ ಪವನ್ಕುಮಾರ್ ತಿಳಿಸಿದರು.
ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಗುರುವಾರ ಸಂಜೆ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಎ.ಸಿ.ಸಿ ಸಿಮೆಂಟ್ ಕಂಪೆನಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಆಯೋಜಿಸಿದ್ದ ಕೌಶಲ್ಯ ತರಬೇತಿ ಮತ್ತು ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದಿನದ ಆದಾಯವನ್ನು ನಂಬಿ ಜೀವನ ನಡೆಸುವ ಕಟ್ಟಡ ಕಾರ್ಮಿಕರು ತಮ್ಮ ಕೌಶಲ್ಯವನ್ನು ಹೇಗೆ ಅಭಿವೃದ್ಧಿ ಪಡಿಸಿಕೊಳ್ಳಬಹುದೆಂದು ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಮಿಕರು ಮತ್ತು ಮೇಸ್ತ್ರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಹಿತೈಷಿ, ಮುಖಿ, ಕೆ.ಪವನ್, ಮಂಜುನಾಥರೆಡ್ಡಿ, ಅನಿಲ್ಕುಮಾರ್, ರಾಮಾಂಜುಲು, ನಂದಗೋಕುಲ ಟ್ರೇಡರ್ಸ್ ನಾಗರಾಜು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!