14.1 C
Sidlaghatta
Friday, February 7, 2025

ಕನ್ನಡಪರ ಕೆಲಸಗಳು ಹೆಚ್ಚಾಗಲಿ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಗಷ್ಟೇ ಸೀಮಿತವಾಗದೆ ವಿವಿಧ ಕನ್ನಡಪರ ಕೆಲಸಗಳಿಗೆ ಪೂರಕವಾಗಲಿ ಎಂದು ಸಮಾನ ಮನಸ್ಕರ ಹೋರಾಟ ಸಮಿತಿ ತಾಲ್ಲೂಕು ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ ತಿಳಿಸಿದರು.
ತಾಲ್ಲೂಕಿನ ಹೊಸಪೇಟೆ ಗ್ರಾಮದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕನ್ನಡ ರಾಜ್ಯೋತ್ಸವವನ್ನು ಕೇವಲ ಆಚರಣೆಗಷ್ಟೇ ಸೀಮಿತಗೋಳಿಸದೇ ನಾಡು–ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ ಕನ್ನಡ ನಾಡು-ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗೆ ಹೇಗೆ, ನಾಡು ಎದುರಿಸುತ್ತಿರುವ ಸಮಸ್ಯೆಗಳು ಯಾವುವು, ಕನ್ನಡಿಗರು ಮಾಡಬೇಕಾದುದೇನು ಮುಂತಾದ ಹತ್ತು ಹಲವು ಸಂಗತಿಗಳ ಕುರಿತು ಗಂಭೀರ ಸ್ವರೂಪದ ಚರ್ಚೆ, ಸಮಾಲೋಚನೆ, ಚಿಂತನೆಗಳು ನಡೆಯಬೇಕಾಗಿದೆ ಎಂದು ಹೇಳಿದರು.
ಮಕ್ಕಳಿಂದ ಕನ್ನಡ ನಾಡು ನುಡಿಯನ್ನು ಪ್ರಶಂಸಿಸುವ ಗೀತೆಗಳಿಗೆ ನೃತ್ಯ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ನಿವೃತ್ತ ಶಿಕ್ಷಕ ನಂದೀಶ್, ಲಕ್ಷ್ಮೀನಾರಾಯಣಪ್ಪ, ಮುನಿರಾಜು, ವೆಂಕಟಸ್ವಾಮಿ, ಜಗದೀಶ್ ಬಾಬು ಮತ್ತು ಶಶಿಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಹೊಸಪೇಟೆ ಶಶಿಕುಮಾರ್, ರಮೇಶ್, ಬಸಪ್ಪ, ಪ್ರಕಾಶ್, ಲಕ್ಷ್ಮೀನಾರಾಯಣಪ್ಪ, ಚನ್ನಕೇಶವ, ಮುರಳಿ ಹಾಗೂ ಕನ್ನಡಸೇನೆ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!