31.1 C
Sidlaghatta
Saturday, April 20, 2024

ಕನ್ನಡ ಭಾಷೆಗೆ ಧಕ್ಕೆ ಬಂದಾಗ ಎಲ್ಲರೂ ಒಗ್ಗೂಡಿ

- Advertisement -
- Advertisement -

ಕನ್ನಡ ನಾಡು ನುಡಿ ಸಂಸ್ಕೃತಿ ಭಾಷೆಯನ್ನು ಸಂರಕ್ಷಿಸಲು ಕನ್ನಡಿಗರೆಲ್ಲಾ ಒಂದಾಗಿ ಶ್ರಮಿಸುವಂತೆ ಜನತೆಯಲ್ಲಿ ಅರಿವು ಮೂಡಿಸುವ ಸಲುವಾಗಿ ಕನ್ನಡ ರಾಜ್ಯೋತ್ಸವಗಳನ್ನು ಸಂಘಸಂಸ್ಥೆಗಳು ಆಚರಿಸುತ್ತಾ ಬಂದಿರುವುದು ಶ್ಲಾಘನೀಯ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಶುಕ್ರವಾರ ಭುವನೇಶ್ವರಿ ಕನ್ನಡ ಕಲಾ ಯುವಕರ ಸಂಘ, ಉಪ್ಪಿ ಗೆಳೆಯರ ಬಳಗ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷಿಗರು ಸಹೃದಯರು. ಕನ್ನಡ ಭಾಷೆಯೊಂದಿಗೆ ಬೇರೆ ಭಾಷೆಯನ್ನೂ ಗೌರವಿಸುತ್ತಾರೆ. ಕನ್ನಡ ನೆಲ, ಜಲ, ಭೂಮಿ, ಸಂಸ್ಕೃತಿ, ಭಾಷೆಗೆ ಧಕ್ಕೆ ಬಂದಾಗ ಒಗ್ಗಟ್ಟಾಗಿ ಹೋರಾಡಿ ರಕ್ಷಣೆ ಮಾಡುವ ಕೆಲಸ ಕನ್ನಡಿಗರಾದ ನಮ್ಮ ಜವಾಬ್ದಾರಿ ಎಂದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಬಿ.ಪಿ ರಾಮಕೃಷ್ಣಪ್ಪ ನೆರವೇರಿಸಿದರು.
ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತಿ ಮಾಜಿ ಅದ್ಯಕ್ಷ ವಿ.ಸುಬ್ರಮಣಿ, ಸ್ಥಾಯಿ ಸಮಿತಿ ಮಾಜಿ ಅದ್ಯಕ್ಷ ಆರ್.ಶ್ರೀನಿವಾಸ್, ಮುನಿಕೃಷ್ಣಪ್ಪ, ತಾಲ್ಲೂಕು ಪಂಚಾಯತಿ ಅದ್ಯಕ್ಷೆ ಆಂಜನಮ್ಮ, ಸದಸ್ಯ ವೆಂಕಟೇಶ್, ಸಂತೋಷ್, ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಬೈರೇಗೌಡ, ಜಂಗಮಕೋಟೆ ಬ್ಲಾಕ್ ಕಾಂಗ್ರೆ್ರಸ್ ಅದ್ಯಕ್ಷ ಎಚ್.ಎಂ.ಮುನಿಯಪ್ಪ, ವೈ-ಹುಣಸೇನಹಳ್ಳಿ ಕ್ಯಾತಪ್ಪ, ಬಿ.ಕೆ.ಮುನಿಕೆಂಪಣ್ಣ, ಎಸ್.ವೆಂಕಟೇಶ್, ಡಿ.ವಿ.ಚಂದ್ರಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!