ಕನ್ನಡ ಭಾಷೆಯನ್ನು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ

- Advertisement -
- Advertisement -

ಕನ್ನಡ ಭಾಷೆಯನ್ನು ಪ್ರೀತಿಸುತ್ತಾ ಅದನ್ನು ಇನ್ನಷ್ಟು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಜೆ.ವಿ.ವೆಂಕಟಸ್ವಾಮಿ ಹೇಳಿದರು.
ತಾಲ್ಲೂಕಿನ ಹೊಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ 4 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯವಾಗಿದ್ದು ಕರ್ನಾಟಕದ ಗತಕಾಲದ ವೈಭವವನ್ನು ಸ್ಮರಿಸುವುದರೊಂದಿಗೆ ಮಾತೃ ಭಾಷೆಯ ಅಭಿವೃಧ್ದಿಗಾಗಿ ಎಲ್ಲರೂ ಶ್ರಮಿಸಬೇಕು ಎಂದರು. ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರುಗಳ ಚರಿತ್ರೆಗಳನ್ನು ತಿಳಿದುಕೊಳ್ಳುವಂತಹ ಪ್ರಯತ್ನ ಮಕ್ಕಳು ಮಾಡಬೇಕು ಎಂದರು.
ಜಿಲ್ಲಾ ಘಟಕದ ಉಪಾಧ್ಯಕ್ಷ ಎನ್.ಇ.ಜಗದೀಶ್ಬಾಬು ಮಾತನಾಡಿ, ಸದೃಢ ಹಾಗೂ ಸಮೃದ್ಧ ನಾಡನ್ನು ಕಟ್ಟಲು ಶ್ರಮಿಸಿದ ನಾಡಿನ ಕವಿಗಳು, ಕಲಾವಿದರು, ಸಾಹಿತಿಗಳು, ಸಂತರು ಹಾಗೂ ಕರ್ನಾಟಕದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಎಲ್ಲಾ ಗಣ್ಯಮಾನ್ಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕನ್ನಡ ಸಂಸ್ಕೃತಿ ಉಳಿದು ಬೆಳೆಯಲು ಕೇವಲ ಹಬ್ಬಗಳನ್ನು ಆಚರಿಸುವುದರಿಂದ ಸಾಧ್ಯವಿಲ್ಲ. ಬದಲಿಗೆ ನಿರಂತರವಾಗಿ ಭಾಷೆಯನ್ನು ಬಳಸುವುದರಿಂದ ಭಾಷೆಯನ್ನು ಬೆಳೆಸಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ನೃತ್ಯಗಳನ್ನು ಏರ್ಪಡಿಸಲಾಗಿತ್ತು.
ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮಾರುತಿ, ಸಮಾಜ ಸೇವಕ ಎಚ್.ಸುರೇಶ್, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಪಿ.ಈ.ಕರಗಪ್ಪ, ಮುಖಂಡರಾದ ಲಕ್ಷ್ಮೀನಾರಾಯಣಪ್ಪ, ಪಾಪಣ್ಣ, ಕರುನಾಡ ಜಾಗೃತಿ ಸಮಿತಿ ರಾಜ್ಯ ಘಟಕದ ಆರ್.ವಿ.ಮಹೇಶ್ಕುಮಾರ್, ಮಹಮದ್ ಇಸ್ಮಾಯಿಲ್, ಮಂಜುನಾಥ್, ಮುನಿರಾಜು(ಕುಟ್ಟಿ), ಡಿ.ಸಿ.ಮುನಿರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಎಚ್.ಎಂ. ಮುರಳಿ ಹಾಜರಿದ್ದರು.
 

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!