Home News ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಉದ್ಘಾಟನೆ

ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಉದ್ಘಾಟನೆ

0

ಸಂಘಟನೆಗಳು ನಾಡು, ನುಡಿ, ನೆಲ ಜಲ, ಭಾಷೆಯ ಉಳಿವಿಗಾಗಿ ಹೋರಾಟಗಳನ್ನು ಮಾಡುವ ಮೂಲಕ ನಾಡಿನ ರಕ್ಷಣೆಗೆ ಮುಂದಾಗಬೇಕು ಎಂದು ತಹಸೀಲ್ದಾರ್ ಎಸ್.ಅಜಿತ್‍ಕುಮಾರ್ ರೈ ಹೇಳಿದರು.
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಗುರುವಾರ ಕನ್ನಡ ರಕ್ಷಣಾ ವೇಧಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡ ಭಾಷೆಯ ಉಳಿವಿಗಾಗಿ ಸದಾಕಾಲ ಸಂಘಟನೆಗಳು ಪ್ರಾಮಾಣಿಕವಾಗಿ ಹೋರಾಟಗಳನ್ನು ಮಾಡುವಂತಹ ಕೆಲಸವನ್ನು ಮಾಡಬೇಕು, ಯುವಜನತೆ ಮುಂದಿನ ಪೀಳಿಗೆಗೆ ಮಾದರಿಯಾಗಿ ಸಂಘಟಿತರಾಗಬೇಕು, ತಾಲೂಕಿನಾಧ್ಯಂತ ಈ ರೀತಿಯಾದ ಸಂಘಟನೆಗಳು ಬೆಳೆಯಬೇಕು ಎಂದರು.
ಗ್ರಾಮಾಂತರ ಠಾಣೆ ಪಿಎಸ್ಸೈ ಪ್ರದೀಪ್ ಪೂಜಾರಿ ಮಾತನಾಡಿ ಸಂಂಘಟನೆಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು, ವೈಯಕ್ತಿಕವಾಗಿ ಯಾರಿಗೂ ನೋವು ಉಂಟಾಗುವ ಹಾಗೆ ನಡೆದುಕೊಳ್ಳದೆ, ಪ್ರಾಮಾಣಿಕವಾಗಿ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು, ಅನ್ಯ ಭಾಷೆಗಳ ಪ್ರಭಾವದಿಂದಾಗಿ ಕನ್ನಡ ಭಾಷೆಯು ಅಲ್ಪಸಂಖ್ಯಾತ ಭಾಷೆಯಾಗುತ್ತಿದ್ದು ಬಾಷೆಯ ಬೆಳವಣಿಗೆಯಲ್ಲಿ ಯುವಕರು ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದರು.
ಕನ್ನಡ ರಕ್ಷಣಾ ವೇಧಿಕೆ ಸ್ವಾಭಿಮಾನಿ ಬಣದ ಎಸ್.ಮೋಹನ್ ಮಾತನಾಡಿ ರಾಜ್ಯದ ಗಡಿಭಾಗಗಳಲ್ಲಿ ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಲೆ ಇವೆ, ಅನ್ಯ ಭಾಷೆಗಳ ಜನಾಂಗದಿಂದ ತುಂಬಿರುವ ನಾಡಿನಲ್ಲಿ ನಿರಂತರವಾಗಿ ದೌರ್ಜನ್ಯಗಳನ್ನು ಅನುಭವಿಸುತ್ತಿರುವ ನಾಡಿನ ಜನತೆಗೆ ರಕ್ಷಣೆ ನೀಡಬೇಕಾದಂತಹ ಅನಿವಾರ್ಯತೆ ಎದುರಾಗಿದೆ, ವಿಧ್ಯಾರ್ಥಿಗಳು, ಮಹಿಳೆಯರ ಮೇಲೆ ಹೆಚ್ಚಾಗುತ್ತಿರುವ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿಯೂ ಸಂಘಟನೆ ಹೋರಾಟ ಮಾಡಲಿದೆ, ಸದಾಕಾಲ ನಾಡಿನ ಭಾಷೆ, ನೆಲ, ಜಲ, ಸಂಸ್ಕøತಿ ಪರಂಪರೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಿ, ನಾಡಿನ ಯಾವುದೇ ಮೂಲೆಯಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ದಕ್ಕೆಯುಂಟಾದಾಗ ನಿರಂತರವಾಗಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಸ್.ಅಜಿತ್‍ಕುಮಾರ್ ರೈ ಹಾಗು ಗ್ರಾಮಾಂತರ ಠಾಣೆ ಪಿಎಸ್ಸೈ ಪ್ರದೀಪ್‍ಪೂಜಾರಿ ರನ್ನು ಕರವೇ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ತಾಲೂಕು ಅಧ್ಯಕ್ಷ ವಿ.ಎಂ.ಸತೀಶ್, ಗೌರವಾಧ್ಯಕ್ಷ ಕೆ.ಮುನಿಯಪ್ಪ, ಉಪಾಧ್ಯಕ್ಷರಾದ ಕೆ.ವಿ.ಮಂಜುನಾಥ್,ಮುರಳಿಮೋಹನ್, ನರಸಿಂಹಮೂರ್ತಿ, ಕಾರ್ಯದರ್ಶಿ ಎಸ್.ಎಂ.ಮಂಜುನಾಥ, ಸಹ ಕಾರ್ಯದರ್ಶಿ ಕೆ.ವಿ.ಮಂಜುನಾಥ, ಪದಾಧಿಕಾರಿಗಳಾದ ಕೆ.ಎಂ.ಮಂಜುನಾಥ, ಬಾಬು.ಬಿ. ಟಿ.ಆಂಜಿನಪ್ಪ ಮತ್ತಿತರರು ಹಾಜರಿದ್ದರು.