24.9 C
Sidlaghatta
Saturday, February 21, 2026

ಕನ್ನಡ ಸಾಹಿತ್ಯ ಪರಿಷತ್ತಿನ ರಾಜಕೀಯ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ನನಗೆ ಮತಗಳನ್ನು ನೀಡುವಂತೆ ಚಿಕ್ಕಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಕೆ.ಪಿ.ನವಮೋಹನ್ ಮನವಿ ಮಾಡಿದರು.
ನಗರದ ಪತ್ರಕರ್ತರ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರಾಗಿ ಈ ಹಿಂದೆ ಇದ್ದಂತಹವರು ಯಾವುದೇ ತಾಲ್ಲೂಕು ಅಧ್ಯಕ್ಷರುಗಳನ್ನು ಪರಿಗಣಿಸುತ್ತಿರಲಿಲ್ಲ. ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆಯಾದರೂ ಕೂಡಾ ಯಾವುದೇ ಅಧ್ಯಕ್ಷರುಗಳಿಗೆ ಮಾಹಿತಿ ನೀಡುತ್ತಿರಲಿಲ್ಲ, ಇದರಿಂದ ಬೇಸತ್ತು, ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕಾಯಿತು. ಅಧ್ಯಕ್ಷ ಸ್ಥಾನಕ್ಕೆ ಒಮ್ಮತ ಅಭ್ಯರ್ಥಿಯನ್ನು ನೇಮಕ ಮಾಡುವಂತಹ ವಿಚಾರದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಕೆಲವು ಮಂದಿ ಬೆಂಬಲಿಗರನ್ನು ಮಾತ್ರ ಸೇರಿಸಲಾಗಿತ್ತು. ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಇರಲಿಲ್ಲ.
ಕೆಲವು ಮಂದಿ ಕನ್ನಡ ಸಾಹಿತ್ಯ ಪರಿಷತ್ತನ್ನು ತಮ್ಮ ಕಪಿಮುಷ್ಟಿಯಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಯಾರಿಗೂ ಮಾಹಿತಿ ನೀಡುತ್ತಿರಲಿಲ್ಲ. ಈ ಹಿಂದೆ ಹಿರಿಯರಿಗೆ ಅವಕಾಶ ಮಾಡಿಕೊಟ್ಟು, ಎರಡು ಬಾರಿ ಕಣದಿಂದ ಹಿಂದೆ ಸರಿದಿದ್ದೆ, ಆದರೂ ಈ ಬಾರಿ ನಮಗೆ ಸಹಕಾರ ನೀಡಲಿಲ್ಲ. ಆದ್ದರಿಂದ ಕಣದಲ್ಲಿ ಉಳಿದುಕೊಂಡಿದ್ದೇನೆ, ಈ ಹಿಂದೆ ಅನೇಕ ಕಾರ್ಯಕ್ರಮಗಳನ್ನು ಕನ್ನಡಪರವಾಗಿ ಕೆಲಸ ಮಾಡಿದ್ದು, ಈ ಚುನಾವಣೆಯಲ್ಲಿ ನನಗೆ ಅವಕಾಶ ಮಾಡಿಕೊಟ್ಟರೆ, ಕನ್ನಡಪರವಾದ ಹೆಚ್ಚಿನ ಕಾರ್ಯಕ್ರಮಗಳನ್ನು ಮಾಡುವುದಾಗಿ ಹೇಳಿದರು.
ಆಟೋ ಚಾಲಕರ ಸಂಘದ ಅಧ್ಯಕ್ಷ ಬಾಲಕೃಷ್ಣ (ಮೊಬೈಲ್ಬಾಬು), ಕೃಷ್ಣಪ್ಪ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!