ನಗರದ ಹಿರಿಯ ನಾಗರಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಮಾನವ ಹಕ್ಕುಗಳ ಆಯೋಗದ ಸದಸ್ಯರು ದೇವನಹಳ್ಳಿ ಟೋಲ್ ಬಳಿ ಬುಧವಾರ ಪ್ರತಿಭಟಿಸಿದ್ದಾರೆ.
ದೇವನಹಳ್ಳಿ ಸಮೀಪವಿರುವ ಟೋಲ್ನಲ್ಲಿ ಹಣ ನೀಡಿದರೂ ಹಿರಿಯ ನಾಗರಿಕರೊಂದಿಗೆ ಅಸಭ್ಯವಾಗಿ ಮಾತನಾಡಿದ ವ್ಯಕ್ತಿಯು ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಟೋಲ್ನಲ್ಲಿ ರೌಡಿಗಳನ್ನಿಟ್ಟುಕೊಂಡು ಹಣ ಸಂಗ್ರಹಿಸಲಾಗುತ್ತಿದೆ. ಕನಿಷ್ಠ ಸೌಜನ್ಯವಾಗಿ ನಡೆದುಕೊಳ್ಳದ ಸಿಬ್ಬಂದಿಯನ್ನು ಕೂಡಲೇ ವರ್ಗಾಯಿಸಬೇಕು ಎಂದು ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗದ ಗ್ರಾಹಕರ ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ತಮೀಮ್ ಅನ್ಸಾರಿ ಆಗ್ರಹಿಸಿದರು.
ಟೋಲ್ ವ್ಯವಸ್ಥಾಪಕ ಪ್ರಕಾಶ್, ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳಲಾಗುತ್ತದೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.
ಶಿಡ್ಲಘಟ್ಟ ತಾಲ್ಲೂಕು ಕರವೇ ಕಾರ್ಯಕರ್ತರಾದ ಕಣಿತಹಳ್ಳಿ ಮೂರ್ತಿ, ನಾಗರಾಜ್, ವೀರಾಪುರ ಮಣಿ, ಶಿವಕುಮಾರ್, ಮುನಿರಾಜ್, ಪ್ರಕಾಶ್, ನ್ಯಾಮತ್ತುಲ್ಲ, ಇನಾಯತ್, ಇರ್ಫಾನ್, ಆಖಿಲ್, ಸಿದ್ದಿಕ್, ಶಾಯದ್ ಆಫ್ರಿದ್, ಕರವೇ ಬ್ಯಾಟರಾಯನಪುರ ಘಟಕದ ಅಧ್ಯಕ್ಷ ಸುರೇಶ್, ದೇವನಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮಮೂರ್ತಿ, ವಿಜಯಪುರ ತಾಲ್ಲೂಕು ಘಟಕದ ಅಧ್ಯಕ್ಷ ರಘು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- Advertisement -
- Advertisement -
- Advertisement -
- Advertisement -