19.1 C
Sidlaghatta
Saturday, December 27, 2025

ಕರಾಟೆ ಕಲಿಕೆಯಿಂದ ಆತ್ಮಸ್ಥೈರ್ಯ ಬೆಳೆಯುತ್ತದೆ

- Advertisement -
- Advertisement -

ಸದೃಢ ವ್ಯಕ್ತಿತ್ವಕ್ಕೆ ಕರಾಟೆ ಪೂರಕ. ಕರಾಟೆ ಕಲಿಕೆಯಿಂದ ನಮ್ಮಲ್ಲಿ ಆತ್ಮಸ್ಥೈರ್ಯ ಬೆಳೆಯುವ ಜತೆಗೆ ಹೋರಾಟ ಮನೋಭಾವ ವೃದ್ಧಿಯಾಗುತ್ತದೆ ಎಂದು ಗೌರಿಬಿದನೂರಿನ ಆರನೇ ಬ್ಲಾಕ್ ಬೆಲ್ಟ್ ಚಂದ್ರಶೇಖರ್ ತಿಳಿಸಿದರು.
ನಗರದ ಅರಳೇಪೇಟೆಯ ಬಸವೇಶ್ವರ ದೇವಾಲಯದ ಆವರಣದಲ್ಲಿ ದಿವ್ಯಭಾರತ್ ಕರಾಟೆ ಡೋ ಅಸೋಸಿಯೇಷನ್ ವತಿಯಿಂದ ಭಾನುವಾರ ನಡೆದ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ಪರೀಕ್ಷಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕರಾಟೆ ಅಭ್ಯಾಸದಿಂದ ಆರೋಗ್ಯದಲ್ಲಿ ಸ್ಥಿರತೆ ಕಂಡುಕೊಳ್ಳಬಹುದು. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಹಾಗಾಗಿ, ಪ್ರತಿಯೊಬ್ಬರೂ ಕರಾಟೆ ಕಲಿತು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರಾಟೆ ಕಲಿಕೆ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ತನ್ನದೇ ಪಾತ್ರ ನಿರ್ವಹಿಸುತ್ತದೆ. ಪ್ರತಿಯೊಬ್ಬರೂ ಕರಾಟೆ ಕಲಿಕೆಗೆ ಆಸಕ್ತಿ ವಹಿಸಬೇಕು. ಶಿಡ್ಲಘಟ್ಟದಲ್ಲಿ ಕರಾಟೆ ಕಲಿಕೆಗೆ ಉತ್ತೇಜನ ಸಿಗುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಕರಾಟೆ ಪಟುಗಳು ಕರಾಟೆ ಪ್ರದರ್ಶನ ನೀಡಿದರು. ಕರಾಟೆ ಪಿರಮಿಡ್, ಕೈಗಳ ಮೇಲೆ ದ್ವಿಚಕ್ರ ವಾಹನ ಚಾಲನೆ, ಮುಂತಾದ ಪ್ರದರ್ಶನಗಳನ್ನು ವಿದ್ಯಾರ್ಥಿಗಳು ನೀಡಿದರು. ನಂತರ ತರಬೇತಿ ಪಡೆದ ಕರಾಟೆಪಟುಗಳಿಗೆ ಎಲ್ಲೋ, ಬ್ಲೂ, ಗ್ರೀನ್, ಆರೆಂಜ್, ಪರ್ಪಲ್ ಬೆಲ್ಟ್ ಮತ್ತು ಪ್ರಮಾಣ ಪತ್ರ ವಿತರಿಸಿಲಾಯಿತು.
ದಿವ್ಯಭಾರತ್ ಕರಾಟೆ ಡೋ ಅಸೋಸಿಯೇಷನ್ ಕರಟೆ ಶಿಕ್ಷಕ ವಿ.ಅರುಣ್ ಕುಮಾರ್, ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ನೃತ್ಯ ಕಲಾವಿದ ಸಿ.ಎನ್.ಮುನಿರಾಜು, ಲಯನ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮುನಿರಾಜು, ಜಗದೀಶ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!