ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗುರುವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಾಲ್ಲೂಕು ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಧರಣಿ ಪ್ರಾರಂಭಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕಾಗಿ ನಗರದ ರೇಷ್ಮೆ ಇಲಾಖೆಯ ಖಾಲಿ ಜಾಗವನ್ನು ತಾಲ್ಲೂಕು ಆಡಳಿತ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ತೀರ್ಮಾನಿಸಿದ್ದು ಅದರಂತೆ ಜಾಗವನ್ನು ಅಂಬೇಡ್ಕರ್ ಭವನಕ್ಕೆ ಮೀಸಲಿರಿಸುವುದು. ಬಗರಹುಕ್ಕುಂ ಸಾಗುವಳಿ ಸಮಿತಿಯಲ್ಲಿ ತಾಲ್ಲೂಕಾದ್ಯಂತ ದಲಿತರು ನಮೂನೆ 50 ಹಾಗೂ 53 ರಲ್ಲಿ ಅರ್ಜಿ ಸಲ್ಲಿಸಿದ್ದು ಇದುವರೆಗೂ ಸಾಗುವಳಿದಾರರಿಗೆ ಯಾವುದೇ ರೀತಿಯ ಸಾಗುವಳಿ ಚೀಟಿ ನೀಡದೆ ದೋರಣೆಯನ್ನು ತೋರುತ್ತಿದ್ದು ಕೂಡಲೆ ಕ್ರಮ ಕೈಗೊಂಡು ಸಾಗುವಳಿ ಚೀಟಿ ನೀಡಬೇಕು. ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಎಸ್ಸಿಪಿ ಟಿಎಸ್ಪಿ ಯೋಜನೆಯಲ್ಲಿ ಅಕ್ರಮ ನಡೆದಿದ್ದು ಅನುದಾನಗಳನ್ನು ದುರುಪಯೋಗಪಡಿಸಿದ್ದು ದಲಿತರಿಗೆ ಅನ್ಯಾಯವಾಗುತ್ತಿದ್ದು ಕೂಡಲೇ ತನಿಖೆ ನಡೆಸಬೇಕು. ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಲ್ಲಿ ಶೇಕಡಾ 25 ರಷ್ಟು ಅನುದಾನ ದುರುಪಯೋಗಪಡಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುವುದು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಕೆ.ಎಸ್.ಅರುಣ್ಕುಮಾರ್, ತಾಲ್ಲೂಕು ಸಂಚಾಲಕ ಅಶೋಕ್, ಸಂಘಟನಾ ಸಂಚಾಲಕ ಜಯಶೀಲಕುಮಾರ್, ವೇಣುಗೋಪಾಲ್, ನರಸಿಂಹಮೂರ್ತಿ, ಚಂದ್ರಶೇಖರ್, ನಾಗರಾಜು, ಮುನಿರಾಜು, ಉಮಾಶಂಕರ್, ವೇಣು, ಮುನಿವೆಂಕಟಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







