ಉತ್ತರ ಭಾರತದಲ್ಲಿ ನಿರಂತರವಾಗಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಲ್ಲೆಗಳನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮನೋರಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ದೇಶದಾಧ್ಯಂತ ಬಿಜೆಪಿ ಸರ್ಕಾರವಿರುವ ಬಹುತೇಕ ರಾಜ್ಯಗಳಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ, ಹಲ್ಲೆ, ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಗಳು ನಡೆಯುತ್ತಿವೆ. ಮಾಯಾವತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ದಯಾಶಂಕರ್ ಸಿಂಗ್ರನ್ನು ಕೂಡಲೇ ಬಂಧಿಸಿ ಗಡೀಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಗುಜರಾತಿನಲ್ಲಿರುವ ಬಿಜೆಪಿಯ ಗೋರಕ್ಷಕದಳವನ್ನು ನಿಷೇಧ ಮಾಡಬೇಕು. ದೇಶದ ಜನಸಂಖ್ಯೆಗೆ ಅನುಗುಣವಾಗಿ ಪ್ರತ್ಯೇಕ ರಾಜ್ಯಗಳನ್ನು ದಲಿತರಿಗೆ ನೀಡಬೇಕು ಎಂದು ಒತ್ತಾಯಿಸಿ ಅವರು ತಹಸೀಲ್ದಾರ್ ಕೆ.ಎಂ.ಮನೋರಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಕೆ.ಎಂ.ಮನೋರಮಾ ಕೂಡಲೇ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕ.ದ.ಸಂ.ಸ ತಾಲ್ಲೂಕು ಸಂಚಾಲಕ ಅರುಣ್ಕುಮಾರ್, ಸಂಘಟನಾ ಸಂಚಾಲಕರಾದ ಮುನಿವೆಂಕಟಪ್ಪ, ಅಶೋಕ್, ಕಿರಣ್ಕುಮಾರ್, ವೇಣುಗೋಪಾಲ್, ದೇವರಾಜ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -