ಕಷ್ಟದಲ್ಲಿರುವವರಿಗೆ ನೆರವಾಗುವುದು, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಗ್ರಾಮೀಣ ಮಟ್ಟದಲ್ಲಿ ಸಮಸ್ಯೆಗಳಿಗೆ ಸ್ಪಂದಿಸುವುದು ಸಂಘಟನೆಯ ಮುಖ್ಯ ಉದ್ದೇಶಗಳಾಗಬೇಕು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಬಳಿಯ ಮುತ್ಯಾಲಮ್ಮ ದೇವಾಲಯದ ಸಮುದಾಯಭವನದಲ್ಲಿ ಮಂಗಳವಾರ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅವರು ಮಾತನಾಡಿದರು.
ಸಾಮಾಜಿಕ ವ್ಯವಸ್ಥೆಯಲ್ಲಿ ಅಭಿವೃದ್ಧಿ ಸಾಧಿಸಬೇಕಾದರೆ ಸಂಘಟನೆ ಮುಖ್ಯ. ಸಂಘಟನೆಯ ಮುಖ್ಯ ಉದ್ದೇಶ ಸಾಮಾಜಿಕ ಜಾಗೃತಿಯಾಗಿದೆ. ರಾಜಕೀಯವನ್ನು ದೂರವಿಟ್ಟು ಸಾಮಾಜಿಕ ಬದ್ಧತೆ ನಿಮ್ಮ ಧ್ಯೇಯವಾಗಲಿ ಎಂದು ಸಲಹೆ ನೀಡಿದರು.
ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಡಿ.ಪಿ.ಮುನಿರಾಜು, ತಾಲ್ಲೂಕು ಕಾರ್ಯಾಧ್ಯಕ್ಷರಾಗಿ ಎನ್.ಸುರೇಶ್, ಉಪಾಧ್ಯಕ್ಷರಾಗಿ ಮುರಳಿ, ಸಹಕಾರ್ಯದರ್ಶಿಯಾಗಿ ತೊಟ್ಲಗಾನಹಳ್ಳಿ ವಿಶ್ವನಾಥ್, ಜಂಗಮಕೋಟೆ ಹೋಬಳಿ ಅಧ್ಯಕ್ಷರಾಗಿ ಯಣ್ಣಂಗೂರು ಮುರಳಿ ಅವರನ್ನು ಆಯ್ಕೆ ಮಾಡಲಾಯಿತು.
- Advertisement -
- Advertisement -
- Advertisement -