Home News ‘ಕವಿ ನಮನ’ – ‘ನಮ್ಮ ಊರು, ನಮ್ಮ ಕೇರಿ, ನಮ್ಮ ಓದು’

‘ಕವಿ ನಮನ’ – ‘ನಮ್ಮ ಊರು, ನಮ್ಮ ಕೇರಿ, ನಮ್ಮ ಓದು’

0

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ವತಿಯಿಂದ ‘ಕವಿ ನಮನ’ – ‘ನಮ್ಮ ಊರು, ನಮ್ಮ ಕೇರಿ, ನಮ್ಮ ಓದು’ ಎಂಬ ಕಾರ್ಯಕ್ರಮವನ್ನು ಜೂನ್ 12 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ವಾಸವಿ ಕಲ್ಯಾಣ ಮಂಟಪದ ಬಳಿಯಿರುವ ಗಂಗಮ್ಮನ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ನಗರದ ಪ್ರತಿಯೊಂದು ವಾರ್ಡ್ನಲ್ಲೂ ಕ.ಸಾ.ಪ ವತಿಯಿಂದ ಈ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿದ್ದು, ಕವಿ ಪರಿಚಯ, ಸಾಹಿತ್ಯ, ಕಲೆಗೆ ಸಂಬಂಧಿಸಿದಂತೆ ಪ್ರತಿಭೆಗಳ ಅನಾವರಣ ಈ ಕಾರ್ಯಕ್ರಮದ ಉದ್ದೇಶ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿ ಕಾಗತಿ ವೆಂಕಟರತ್ನಂ ನಡೆಸಿಕೊಡಲಿದ್ದು, ಮುಖ್ಯ ಅತಿಥಿಗಳಾಗಿ 21ನೇ ವಾರ್ಡ್ ನ ನಗರಸಭಾ ಸದಸ್ಯೆ ಸುಗುಣ ಲಕ್ಷ್ಮೀನಾರಾಯಣ್ ಹಾಗೂ ಅಧ್ಯಕ್ಷತೆಯನ್ನು ಕ.ಸಾ.ಪ ತಾಲ್ಲೂಕು ಅಧ್ಯಕ್ಷ ಬಿ.ಆರ್. ಅನಂತಕೃಷ್ಣ ವಹಿಸಲಿದ್ದಾರೆ.