ಕಸಾಪದಿಂದ ವಿಶ್ವ ಅಂಚೆ ದಿನಾಚರಣೆ ಕಾರ್ಯಕ್ರಮ

0
382

ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಗಂಗಮ್ಮನ ದೇವಾಲಯದ ಆವರಣದಲ್ಲಿ ಮಂಗಳವಾರ ತಾಲ್ಲೂಕು ಕಸಾಪ ವತಿಯಿಂದ ಆಚರಿಸಿದ ವಿಶ್ವ ಅಂಚೆ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊಂಡೇನಹಳ್ಳಿ ವಿಭಾಗದ ಅಂಚೆ ಪೇದೆ ಆನಂದಮೂರ್ತಿ ಮಾತನಾಡಿದರು.
ಹೆಣ್ಣು ಮಕ್ಕಳ ಅಭಿವೃದ್ಧಿಗಾಗಿ ಹಾಗೂ ಅವರ ಭವಿಷ್ಯದ ವಿದ್ಯಾಭ್ಯಾಸ, ವಿವಾಹದಂತಹ ಖರ್ಚು ವೆಚ್ಚಗಳ ವಿಚಾರದಲ್ಲಿ ಪೋಷಕರಿಗೆ ನೆರವಾಗುವ ಹಣ ಉಳಿತಾಯ ಖಾತೆಯೇ ಭಾರತ ಸರ್ಕಾರ ಆರಂಭಿಸಿರುವ ಸುಕನ್ಯ ಸಮೃದ್ಧಿ ಯೋಜನೆ ಖಾತೆ. ಹಳ್ಳಿಯ ಗೃಹಿಣಿಯರು ತಮ್ಮ ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಸ್ವಲ್ಪಸ್ವಲ್ಪ ಹಣವನ್ನು ಕೂಡಿಡಬಹುದಾಗಿದೆ ಎಂದು ಅವರು ತಿಳಿಸಿದರು.
ಕಳೆದ ಒಂದೂವರೆ ಶತಮಾನದಿಂದಲೂ ಸೇವೆಯನ್ನು ಸಲ್ಲಿಸುತ್ತಿರುವ ಭಾರತೀಯ ಅಂಚೆ ಇಲಾಖೆ ವಿಶ್ವದಲ್ಲೇ ಅತಿ ದೊಡ್ಡದಾದ ಸಂಪರ್ಕ ಜಾಲವನ್ನು ಹೊಂದಿರುವ ಕೀರ್ತಿ ಪಡೆದಿದೆ. ಅಂಚೆ ಸೇವೆ ಸಲ್ಲಿಸುವ ಪೋಸ್ಟ್ ಮ್ಯಾನ್ ನನ್ನು ಹಳ್ಳಿಗಳಲ್ಲಿ ಅಂಚೆಯಣ್ಣ ಎಂದು ಕರೆಯುತ್ತಾ ಕುಟುಂಬದ ಸದಸ್ಯನಂತೆ ಕಾಣುತ್ತಾರೆ ಎಂದರು.
ಅಂಚೆ ಇಲಾಖೆಯ ಸೌಲಭ್ಯಗಳಾದ ಪಿ.ಎಲ್.ಐ, ಆರ್.ಡಿ, ಎಸ್.ಬಿ ಖಾತೆಗಳು, ಅಂಚೆ ಕಾರ್ಡ್, ಅಂತರದೇಶೀಯ ಪತ್ರಗಳು, ರಿಜಿಸ್ಟರ್ಡ್ ಪೋಸ್ಟ್, ಮನಿ ಆರ್ಡರ್, ಸ್ಪೀಡ್ ಪೋಸ್ಟ್ ಹಾಗೂ ಇತರೆ ಅಂಚೆ ಇಲಾಖೆಯ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ವಿವರಿಸಿದರು. ಹೆಣ್ಣುಮಕ್ಕಳ ವಿಶೇಷ ಖಾತೆಯ ಕುರಿತೂ ಅವರು ವಿವರಿಸಿದರು.
ಕಳೆದ ೩7 ವರ್ಷಗಳಿಂದ ತಾಲ್ಲೂಕಿನ ಕೊಂಡೇನಹಳ್ಳಿ, ಕಡಿಶೀಗೇನಹಳ್ಳಿ, ಅಪ್ಪೇಗೌಡನಹಳ್ಳಿ, ಗಂಗನಹಳ್ಳಿ, ಕಂತಹಳ್ಳಿ, ಹನುಮಂತಪುರ, ತಿಮ್ಮನಹಳ್ಳಿ ಗ್ರಾಮಗಳಿಗೆ ಪ್ರತಿದಿನ ಭೇಟಿ ನೀಡಿ ಅಂಚೆ ವಿತರಿಸುವ ಅಂಚೆ ಪೇದೆ ಆನಂದಮೂರ್ತಿ ಅವರನ್ನು ಈ ಸಂದರ್ಭದಲ್ಲಿ ಕಸಾಪ ವತಿಯಿಂದ ಸನ್ಮಾನಿಸಲಾಯಿತು.
ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್‌, ದೇವರಾಜ್‌, ಮುನಿಯಪ್ಪ, ತಿರುಮಳಪ್ಪ, ಮುನಿಕೃಷ್ಣಪ್ಪ, ಮುನಿರಾಜು, ಸುಪ್ರಿಯ, ಸಂಗೀತ, ಮುನಿಯಮ್ಮ, ಮೌನಿಕ, ಚಿಕ್ಕಮುನಿಯಮ್ಮ, ಐಶ್ವರ್ಯ, ಜಳ್ಳಪ್ಪ, ಲಕ್ಷ್ಮಮ್ಮ, ಚಂದನ್‌, ಗಂಗಮ್ಮ, ನಾರಾಯಣಮ್ಮ, ಉಮಾದೇವಿ, ಯಲ್ಲಪ್ಪ ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!