ಕಸಾಪ ವತಿಯಿಂದ ಪೂರ್ಣಚಂದ್ರ ತೇಜಸ್ವಿ 80ನೇ ಜನ್ಮದಿನ ಹಾಗೂ ವಿಶ್ವ ಸಾಕ್ಷರತಾ ದಿನ ಆಚರಣೆ

- Advertisement -
- Advertisement -

ತಾಲ್ಲೂಕಿನ ಗಂಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲ್ಲೂಕು ಕಸಾಪ ವತಿಯಿಂದ ಆಚರಿಸಿದ ಪೂರ್ಣಚಂದ್ರ ತೇಜಸ್ವಿ 80ನೇ ಜನ್ಮದಿನ ಹಾಗೂ ವಿಶ್ವ ಸಾಕ್ಷರತಾ ದಿನ ಕಾರ್ಯಕ್ರಮದಲ್ಲಿ ಶಿಕ್ಷಕ ಚಾಂದ್‌ಪಾಷ ಮಾತನಾಡಿದರು.
‘ಮಾನವನಿಗೆ ಪ್ರಕೃತಿಯ ಅಗತ್ಯವಿದೆ ಹೊರತು ಪ್ರಕೃತಿಗೆ ಮಾನವನ ಅಗತ್ಯವಿಲ್ಲ’ ಇದು ಕನ್ನಡದ ಪ್ರಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಮಾತು. ಕೆಲ ದಿನಗಳ ಹಿಂದಷ್ಟೇ ಕೊಡಗು, ಕೇರಳದಲ್ಲಿ ಸಂಭವಿಸಿದ ಪ್ರವಾಹದ ವೇಳೆ ಈ ಮಾತುಗಳ ಅರ್ಥ ನಮಗಾಗಬೇಕು ಎಂದು ಅವರು ತಿಳಿಸಿದರು.
ತಮ್ಮ ಸಾಹಿತ್ಯದ ಮೂಲಕ ಪರಿಸರ ಹಾಗೂ ಮಾನವ ಸಂಬಂಧಗಳ ನಡುವಿನ ಎಳೆಗಳನ್ನು ತೋರಿಸಿಕೊಟ್ಟಿದ್ದ ತೇಜಸ್ವಿ ಇಂದು ನಮ್ಮೊಂದಿಗಿದ್ದಿದ್ದರೆ ಎಂಭತ್ತು ಭರ್ತಿಯಾಗುತ್ತಿತ್ತು. ಕೇವಲ ಸಾಹಿತಿಗಳು ಮಾತ್ರವಲ್ಲ. ಅವರು ಅನೇಕ ಚಳವಳಿಗಳನ್ನು ಹುಟ್ಟು ಹಾಕಿ ಹೋರಾಟ ನಡೆಸಿದ್ದಾರೆ. ಆದ್ದರಿಂದ ಕರ್ನಾಟಕದ ಸಮಗ್ರ ಚರಿತ್ರೆಯಲ್ಲಿ ಅವರು ಅಜರಾಮರ. ಸಾಹಿತ್ಯ, ಕೃಷಿ, ಪರಿಸರ ಕಾಳಜಿ, ವಿಜ್ಞಾನ, ಮಾನವ ಶಾಸ್ತ್ರ ಮುಂತಾದುವುಗಳ ಬಗ್ಗೆ ಆಳವಾದ ಪಾಂಡಿತ್ಯ ಹೊಂದಿದ್ದ ತೇಜಸ್ವಿ ಬದುಕಿದ್ದು ಸಹ ದಟ್ಟ ಹಸಿರಿನ ಕಾಡುಗಳ ನಡುವೆಯೇ ಎಂದು ಹೇಳಿದರು.
ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್‌ ಮಾತನಾಡಿ, ಶಿಕ್ಷಣದ ಮಹತ್ವ ಸಾರುವ ಈ ದಿನವನ್ನು ವಿಶ್ವ ಸಾಕ್ಷರತಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಕಸಾಪ ಸರ್ಕಾರಿ ಶಾಲೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಿತ್ತಾ ಮಕ್ಕಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿ ಗಾಯಿತ್ರಿ ಅವರನ್ನು ಕಸಾಪ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.
ತಾಲ್ಲೂಕು ಕಸಾಪ ಕಾರ್ಯದರ್ಶಿ ಸತೀಶ್‌, ಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ, ವಿ.ಸಿ.ನಾಗರಾಜ್‌, ಜಿ.ಕೆ.ಶ್ರೀನಿವಾಸ್‌, ಮುತ್ತೂರು ಮುನೇಗೌಡ, ಶಿವಾನಂದ, ಮುನಿಬಚ್ಚಪ್ಪ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!