ರಾಜ್ಯ ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗೆ, ಪಿ.ಎಲ್.ಡಿ ಬ್ಯಾಂಕ್ನಿಂದ ಪ್ರತಿನಿಧಿ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ದೇಶಕ ರಾಯಪಲ್ಲಿ ಅಶ್ವತ್ಥನಾರಾಯಣರೆಡ್ಡಿ ಜೆಡಿಎಸ್ ಬೆಂಬಲಿತರೊಂದಿಗೆ ಸೇರಿ ಪಕ್ಷದ್ರೋಹವೆಸಗಿದ್ದಾರೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿ.ಎಂ.ಗೋಪಾಲ್ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ಧಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರ ಪೈಕಿ 9 ಕಾಂಗ್ರೆಸ್ ಬೆಂಬಲಿತರಿದ್ದರೆ, 4 ಜೆಡಿಎಸ್ ಬೆಂಬಲಿತರಿದ್ದಾರೆ. ಅಕ್ಟೋಬರ್ 15 ರಂದು ರಾಜ್ಯ ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗೆ ಪಿ.ಎಲ್.ಡಿ ಬ್ಯಾಂಕ್ನಿಂದ ಪ್ರತಿನಿಧಿ ಆಯ್ಕೆ ನಡೆಯಿತು. ತಾಲ್ಲೂಕಿನ ಕಾಂಗ್ರೆಸ್ ವರಿಷ್ಠರಾದ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಅವರು ಸೂಚಿಸಿದಂತೆ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರೇ ಪ್ರತಿನಿಧಿಯಾಗಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದಿಂದ ಬಂದ ಸೂಚನೆಯನ್ನು ಧಿಕ್ಕರಿಸಿ ಜೆಡಿಎಸ್ ಪಕ್ಷದವರ ಬೆಂಬಲ ಪಡೆದು ನಿರ್ದೇಶಕ ರಾಯಪಲ್ಲಿ ಅಶ್ವತ್ಥನಾರಾಯಣರೆಡ್ಡಿ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರಾದ ರಮಾದೇವಿ, ಭಾಗ್ಯಮ್ಮ ಕೂಡ ಇವರಿಗೆ ಬೆಂಬಲಿಸಿ ಪಕ್ಷ ದ್ರೋಹವೆಸಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ ಮತ್ತು ಸಂಸದ ಕೆ.ಎಚ್. ಮುನಿಯಪ್ಪ, ಪಕ್ಷ ವಿರೋಧಿ ಚಟುವಟಿಕೆಯನ್ನು ಖಂಡಿಸದೆ ಕ್ರಮ ಕೈಗೊಳ್ಳದೆ ಮೌನವಾಗಿರುವುದು ಈ ಬೆಳವಣಿಗೆಗೆ ಸಮ್ಮತಿಯನ್ನು ಸೂಚಿಸಿರುವಂತಿದೆ. ಈ ಹಿಂದೆ ಜಿಲ್ಲಾ ಪಂಚಾಯತಿ ಅಧ್ಯಕ್ಷ ಚುನಾವಣೆಯ ಸಮಯದಲ್ಲಿ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಹಾಗೂ ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ ಅವರ ಬಗ್ಗೆ ಅನವಶ್ಯಕವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ ಮತ್ತು ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ ಆರೋಪಿಸಿದ್ದರು. ಆದರೆ ಈಗ ಪಕ್ಷದ ವಿರುದ್ಧ ಚಟುವಟಿಕೆ ಕಣ್ಣ ಮುಂದೆ ಇದ್ದರೂ ಏಕೆ ಕ್ರಮ ಕೈಗೊಂಡಿಲ್ಲ ಎಂಬುದಕ್ಕೆ ಉತ್ತರಿಸಲಿ. ನಾವು ಈ ಎಲ್ಲಾ ಪಕ್ಷ ವಿರೋಧಿಗಳ ಕುರಿತಂತೆ ರಾಜ್ಯ ಮಟ್ಟದ ವರಿಷ್ಠರ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.
ನಂದಿನಿ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಗುಡಿಯಪ್ಪ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್.ಶ್ರೀನಿವಾಸ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ಶಂಕರ್, ಕೆ.ಎಂ.ಭೀಮೇಶ್, ಸಿದ್ದಪ್ಪ, ಸಾದಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದರಾಜ್, ನಗರ ಯೋಜನ ಪ್ರಾಧಿಕಾರ ಅಧ್ಯಕ್ಷ ಬಿ.ಪಿ.ರಾಘವೇಂದ್ರ, ಗೊರಮಡುಗು ಕೃಷ್ಣಪ್ಪ, ಶ್ರೀನಾಥ್, ಸಂತೋಷ್, ಮಂಜುನಾಥ್, ಮಯೂರ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -