ಫೆಬ್ರುವರಿ 28 ರ ಬುಧವಾರ ಕಾಂಗ್ರೆಸ್ ಪಕ್ಷದ ಉಮೇದುವಾರಿಕೆಯನ್ನು ಸ್ವೀಕರಿಸಲು ಕೆಪಿಸಿಸಿ ವೀಕ್ಷಕರು ನಗರಕ್ಕೆ ಆಗಮಿಸಿದ್ದರು. ಆಗ ತಮ್ಮ ಉಮೇದುವಾರಿಕೆಯ ಅರ್ಜಿಯನ್ನು ಸಲ್ಲಿಸಲು ಬೆಂಬಲಿಗರೊಂದಿಗೆ ನಿಂತಿದ್ದ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಅವರನ್ನು ಭೇಟಿ ಮಾಡದಂತೆ ವಿ.ಮುನಿಯಪ್ಪ ಅವರ ಬೆಂಬಲಿಗರು ಕೆಪಿಸಿಸಿ ವೀಕ್ಷಕರ ವಾಹನವನ್ನು ತಡೆಗಟ್ಟಿ ಸಾಗಹಾಕಿದ್ದರು.
ಈ ಹಿನ್ನೆಲೆಯಲ್ಲಿ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಚ್ಛೆಯಿಂದ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಹಿತ್ತಲಹಳ್ಳಿ ಕೃಷ್ಣಪ್ಪ, ಆನೂರು ದೇವರಾಜ್, ಅಫ್ಸರ್ಪಾಷ, ಬಾಷಾಸಾಬ್, ಬೈರೇಗೌಡ, ನಟರಾಜ್, ವೆಂಕಟೇಶ್, ಜಮೀರ್, ದಡಂಘಟ್ಟ ಕೃಷ್ಣಪ್ಪ, ತಲಕಾಯಲಬೆಟ್ಟ ಅಶ್ವತ್ಥನಾರಾಯಣರೆಡ್ಡಿ, ಜಾವಿದ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -