Home News ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0

ಯು.ಪಿ.ಎ ಸರ್ಕಾರದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿಯೊಂದು ಗ್ರಾಮ ಪಂಚಾಯತಿಗೆ ವಾರ್ಷಿಕ ಕನಿಷ್ಠ ೫೦–-೬೦ ಲಕ್ಷ ನೆರವು ನೀಡಲಾಗಿತ್ತು. ಇಂದಿನ ಬಿಜೆಪಿ ಸರ್ಕಾರ ನರೇಗಾ ಅನುದಾನವನ್ನು ಕಡಿತಗೊಳಿಸುವ ಗ್ರಾಮೀಣ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿ ಬುಧವಾರ ಜೆ.ಡಿ.ಎಸ್ ಹಾಗೂ ಇನ್ನಿತರೆ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರನ್ನು ಸ್ವಾಗತಿಸಿ ಅವರು ಮಾತನಾಡಿದರು. ಜನಪರ ಯೋಜನೆಗಳಿಂದ ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿಯಾಗಿದ್ದು, ಪ್ರತಿಯೊಬ್ಬರೂ ಉಚಿತವಾಗಿ ಆಹಾರಧಾನ್ಯಗಳನ್ನು ಪಡೆಯುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು.
ಗ್ರಾಮದಲ್ಲಿ ಕಳೆದ ೧೫ ವರ್ಷಗಳ ನಂತರ ತಮ್ಮಿಂದ ದೂರ ಉಳಿದಿದ್ದ ಗ್ರಾಮಸ್ಥರು ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಗ್ರಾಮದಲ್ಲಿ ಏನೇ ಸಮಸ್ಯೆ ಬಂದರೂ ಹಿರಿಯರ ಸಮ್ಮುಖದಲ್ಲಿ ಸಾಮೂಹಿಕವಾಗಿ ಇತ್ಯರ್ಥ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜೆ.ಡಿ.ಎಸ್ ಪಕ್ಷ ತೊರೆದು ರಾಮಣ್ಣ, ನಾಗಣ್ಣ, ವೆಂಕಟಪ್ಪ, ರಾಮಕೃಷ್ಣಪ್ಪ, ರಾಮಚಂದ್ರಪ್ಪ, ಶ್ರೀನಿವಾಸ್,ರಾಮಾಂಜಿನಪ್ಪ, ಸುಬ್ರರಾಯಪ್ಪ, ಮುನಿಯಪ್ಪ, ರಮೇಶ್, ರವಿಕುಮಾರ್, ವೆಂಕಟೇಶ್, ಶಿವಕುಮಾರ್, ನಂದೀಶ್, ಮೂರ್ತಿ, ಗೋಪಾಲಕೃಷ್ಣ, ಮಂಜುನಾಥ್ ಮತ್ತಿತರರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಎಂ.ಮುನಿಕೃಷ್ಣಪ್ಪ, ಲಕ್ಷ್ಮೀನಾರಾಯಣಪ್ಪ, ಟಿ.ಎಂ.ಜಯಣ್ಣ, ಗಣೇಶ್, ದೇವರಾಜ್, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Exit mobile version