ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

- Advertisement -
- Advertisement -

ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಂದ ರಾಜ್ಯದ ಅಭಿವೃದ್ದಿ ಅಸಾಧ್ಯ ಎಂದು ರಾಜ್ಯದ ಜನತೆ ಅರಿತಿದ್ದು ಈ ಬಾರಿ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವುದು ಶತಸಿದ್ದ ಹಾಗಾಗಿ ಕ್ಷೇತ್ರದಾದ್ಯಂತ ಜೆಡಿಎಸ್ ಮುಖಂಡರೂ ಹಾಗೂ ಕಾರ್ಯಕರ್ತರು ಪಕ್ಷ ಬಲಪಡಿಸಲು ಮತ್ತಷ್ಟು ಶ್ರಮಿಸಬೇಕುಎಂದು ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಬಿ.ಎನ್. ರವಿಕುಮಾರ್ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಯುವಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.
೨೦೧೮ ರ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಕ್ಷೇತ್ರದಾದ್ಯಂತ ಈಗಾಗಲೇ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ಶುರುಮಾಡಿದ್ದು ಕಳೆದ ಅವರ ೨೦ ತಿಂಗಳ ಮುಖ್ಯಮಂತ್ರಿಯ ಅವಧಿಯಲ್ಲಿ ಜಾರಿ ಮಾಡಿದ ವಿವಿಧ ಜನಪರ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಮೂಲಕ ಪಕ್ಷಸಂಘಟನೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ಎಂದರು.
ಮುಂದಿನ ಚುನಾವಣೆಯಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ಯವರಿಗೆ ಮತ್ತಷ್ಟು ಶಕ್ತಿ ತುಂಬಬೇಕು ಎಂದರು.

ತಾಲ್ಲೂಕಿನ ಮೇಲೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಯುವಕರನ್ನು ಪಕ್ಷಕ್ಕೆ ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಬರಮಾಡಿಕೊಂಡರು.

ಜೆಡಿಎಸ್ ಮುಖಂಡ ನಾಗಮಂಗಲ ಶ್ರೀನಿವಾಸಗೌಡ ಮಾತನಾಡಿ ಮೇಲೂರು ರವಿಕುಮಾರ್ ತಾಲ್ಲೂಕಿನಲ್ಲಿ ಅನೇಕ ಜನಪರ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಜೊತೆಗೆ ಜೆಡಿಎಸ್ ಪಕ್ಷವನ್ನು ಬಲಪಡಿಸುತ್ತಿದ್ದಾರೆ. ಇವರ ಕಾರ್ಯವೈಖರಿ ಕಂಡು ಕ್ಷೇತ್ರದ ಯುವಜನತೆ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುಖಂಡರೂ ಸೇರಿದಂತೆ ಯುವಕರು ಜೆಡಿಎಸ್ ಸೇರಲಿದ್ದು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಎನ್.ರವಿಕುಮಾರ್ ರಿಗೆ ಪಕ್ಷದ ಬಿ.ಫಾರಂ ನೀಡುವಂತೆ ವರಿಷ್ಠರನ್ನು ಒತ್ತಾಯಿಸಿದರು.
ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮದ ಕನ್ನಡ ಸೇನೆ ಅದ್ಯಕ್ಷ ಮಂಜುನಾಥ, ಶ್ರೀನಿವಾಸ್, ಫಲಿಚೇರ್ಲು ಗ್ರಾಮ ಪಂಚಾಯಿತಿಯ ಬಿನ್ನಿಮಂಗಲ ಗ್ರಾಮದ ಸಂತೋಷ್, ನಾಗರಾಜ, ಸುಬ್ರಮಣಿ, ಸಂತೋಷ್, ವಿಜಯೇಂದ್ರ, ಅಶೋಕ್ ಮತ್ತಿತರ ಯುವಕರು ಜೆಡಿಎಸ್ ಗೆ ಸೇರ್ಪಡೆಗೊಂಡರು.
ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್, ನಗರಸಭೆ ಸದಸ್ಯರಾದ ವೆಂಕಟಸ್ವಾಮಿ, ಶಫಿ, ಮುಖಂಡರಾದ ತಾದೂರು ರಘು, ಕೆ.ಎಸ್.ಮಂಜುನಾಥ್, ಜಂಗಮಕೋಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎಂ.ವೆಂಕಟೇಶ್, ರಮೇಶ್, ಮುಖಂಡರಾದ ಬೈರಪ್ಪ. ಮಾರೇಗೌಡ, ಕೆಂಪಣ್ಣ, ಮುನಿಕೃಷ್ಣ, ಚಂದ್ರು, ನಾರಾಯಣಸ್ವಾಮಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!