ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

- Advertisement -
- Advertisement -

ಈ ದೇಶದ ಎಲ್ಲ ಜಾತಿ, ಧರ್ಮ, ವರ್ಗಗಳಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಿಳಿಸಿದರು.
ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಜ್ಯಾತ್ಯಾತೀತೆಯ ನೆಲಗಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ನಿಂದ ಮಾತ್ರವೇ ಈ ದೇಶದ ಹಿಂದುಳಿದ, ಅಲ್ಪಸಂಖ್ಯಾತ, ದಲಿತರ ಏಳಿಗೆ ಸಾಧ್ಯ ಎಂದರು.
ಪಂಚವಾರ್ಷಿಕ ಯೋಜನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ನೀಡಿದ ಆಧ್ಯತೆಯಿಂದ ಇಡೀ ದೇಶಕ್ಕೆ ವರ್ಷಗಳ ಗಟ್ಟಲೆ ಆಹಾರ ಪದಾರ್ಥಗಳನ್ನು ಪೂರೈಸುವಷ್ಟು ಆಹಾರ ದಾನ್ಯಗಳ ದಾಸ್ತಾನು ನಮ್ಮಲ್ಲಿ ಇದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಇದೆಲ್ಲವೂ ಸಾಧ್ಯವಾಗಿದ್ದು ಇದುವರೆಗೂ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಗಳೆ ಕಾರಣ ಎಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳ ಕುರಿತು ವಿವರಿಸಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಾರಿಕೆಯಿಂದ ಮತದಾರರನ್ನು ಮೋಡಿ ಮಾಡಿ ಅಂಗೈಯಲ್ಲಿ ಅರಮನೆ ತೋರಿಸುವ ಕೆಲಸ ಮಾಡುತ್ತಿದ್ದಾರೆಯೆ ವಿನಹ ಇದುವರೆಗೂ ಯಾವುದೆ ರೀತಿಯ ದೂರದೃಷ್ಟಿಯ ಜನಪರ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ದೂರಿದರು.
ಅಧಿಕಾರವಹಿಸಿಕೊಂಡ ಏಳೆಂಟು ತಿಂಗಳಿಂದಲೂ ವಿದೇಶಗಳನ್ನು ಸುತ್ತುವುದು, ಟಿ.ವಿ, ರೆಡಿಯೋ, ಫೇಸ್ಬುಕ್ನ ಜಾಲತಾಣಗಳಲ್ಲಿ ತಮ್ಮ ಭಾಷಣಗಳನ್ನು ಕೇಳಿಸುತ್ತಿರುವುದಷ್ಟೆ ಅವರ ಸಾಧನೆಯಾಗಿದ್ದು ಬೇರೇನೂ ಆಗಿಲ್ಲ ಎಂದು ಆರೋಪಿಸಿದರು.
ಭಾಷಣದಿಂದ ಬಡವನ ಹೊಟ್ಟೆ ತುಂಬುವುದಿಲ್ಲ. ಸಮಾಜದ ಉದ್ದಾರವೂ ಆಗುವುದಿಲ್ಲ ಎಂದ ಅವರು, ಚುನಾವಣೆ ಸಮಯದಲ್ಲಿ ಮತದಾರನಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿಯವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ದೂರಿದರು. ಹಾಗಾಗಿ ಮತದಾರರು ಬಿಜೆಪಿಗೆ ಮತ ಕೊಟ್ಟಿದ್ದಕ್ಕೆ ಪಶ್ಚಾತ್ಯಾಪ ಪಡುವಂತಾಗಿದೆ ಎಂದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರ ಬುದ್ದಿ ಕಲಿಸಲಿದ್ದಾರೆ ಎಂದು ಹೇಳಿದರು.
ಇದೀಗ ಇಡೀ ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸುವ ಕೆಲಸ ಪುನರಾರಂಭಗೊಂಡಿದ್ದು ಕೆಪಿಸಿಸಿ ಅಧ್ಯಕ್ಷರಾದಿಯಾಗಿ ಸಾಮಾನ್ಯ ಕಾರ್ಯಕರ್ತ ಕೂಡ ಪಕ್ಷದ ಸಾಧನೆಗಳನ್ನು ಮುಂದಿಟ್ಟುಕೊಂಡು ಪಕ್ಷದ ಸದಸ್ಯತ್ವನ್ನು ಮಾಡಿಸಲಿದ್ದೇವೆ.ಈ ಹಿಂದೆ ಕೇಂದ್ರದಲ್ಲಿ ಅಕಾರ ನಡೆಸಿದ ಯುಪಿಎ ಅವಯಲ್ಲಿ ಕೈಗೊಂಡ ನರೇಗಾ ಯೋಜನೆ, ೬೫ ಸಾವಿರ ಕೋಟಿ ರೂಪಾಯಿಗಳ ಸಾಲ ಮನ್ನಾ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜನರಿಗೆ ತಿಳಿಸಿ ಸದಸ್ಯತ್ವನ್ನು ಮಾಡಿಸಲಾಗುತ್ತದೆ. ಪ್ರತಿ ಬೂತುವಾರು ಕನಿಷ್ಟ ೫-೬ಮಂದಿ ಸಕ್ರೀಯ ಸದಸ್ಯರನ್ನು ನೋಂದಾಯಿಸುವ ಕೆಲಸ ಮಾಡಲಾಗುವುದು. ಇದಕ್ಕಾಗಿ ತಾಲೂಕಿನಲ್ಲಿ ನಮ್ಮ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಶ್ರಮಿಸಲಿದ್ದಾರೆ ಎಂದು ಹೇಳಿದರು.
ಜಂಗಮಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಸ್.ಎಂ.ನಾರಾಯಣಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿ.ಎಂ.ಗೋಪಾಲ್, ಉಪಾಧ್ಯಕ್ಷ ರವಿ, ಮುಖಂಡರಾದ ವಿ.ಸುಬ್ರಮಣಿ, ಕೆ.ಗುಡಿಯಪ್ಪ, ಆರ್.ಶ್ರೀನಿವಾಸ್, ಎನ್.ಮುನಿಯಪ್ಪ, ದೊಗರನಾಯಕನಹಳ್ಳಿ ಡಿ.ವಿ.ವೆಂಕಟೇಶ್, ಬಿ.ಎಂ.ಮುನಿಕೃಷ್ಣಪ್ಪ, ನಂದಮುನಿಕೃಷ್ಣಪ್ಪ, ಮೌಲಾ, ಗೊರಮಡಗು ಕೃಷ್ಣಪ್ಪ, ಬಿ.ವಿ.ಮುನೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!