ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮಪಂಚಾಯಿತಿಯ ಕಾಕಚೊಕ್ಕಂಡಹಳ್ಳಿ ಗ್ರಾಮಸ್ಥರು ಲೋಕಸಭೆ ಚುನಾವಣೆ ಬಹಿಷ್ಕರಿಸುತ್ತಿರುವುದಾಗಿ ಗ್ರೇಡ್ ೨ ತಹಶೀಲ್ದಾರ್ ಹನುಮಂತರಾವ್ ಅವರಿಗೆ ಸೋಮವಾರ ಪತ್ರವನ್ನು ನೀಡಿದ್ದಾರೆ.
ಚುನಾಯಿತ ಜನಪ್ರತಿನಿಧಿಗಳು ನಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ರಸ್ತೆ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ. ಆದರಿಂದ ಏಪ್ರಿಲ್ ೧೮ ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಗ್ರಾಮಸ್ಥರೆಲ್ಲ ಸೇರಿ ಬಹಿಷ್ಕರಿಸುತ್ತಿದ್ದೇವೆ.
ಕಾಕಚೊಕ್ಕಂಡಹಳ್ಳಿ ಗ್ರಾಮದಿಂದ ಅಂಕತಟ್ಟಿ ಗೇಟ್ ವರೆಗೂ ರಸ್ತೆ ಸಾಕಷ್ಟು ಹದಗೆಟ್ಟಿದೆ. ಸುಮಾರು ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಬಹಳಷ್ಟು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಈ ರಸ್ತೆಯನ್ನು ಉಪಯೋಗಿಸುವರು. ಕೆರೆ ಮಧ್ಯದ ರಸ್ತೆಯಿದು. ಉತ್ತಮ ಗುಣಮಟ್ಟದ ಡಾಂಬರೀಕರಣ ಮಾಡಬೇಕು. ರಸ್ತೆ ಪೂರಾ ಹಳ್ಳ ಕೊಳ್ಳಗಳಿಂದ ಕೂಡಿರುವುದರಿಂದ ಹಲವಾರು ಅಪಘಾತಗಳು ಸಂಭವಿಸಿವೆ. ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಏನೂ ಪ್ರಯೋಜನವಾಗಿಲ್ಲ. ನಮ್ಮ ಬಗ್ಗೆ ನಿರ್ಲಕ್ಷ್ಯ ತೋರಿರುವ ಜನಪ್ರತಿನಿಧಿಗಳು ನಮಗೆ ಬೇಕಿಲ್ಲ ಎಂದು ಹೇಳಿದರು.
ಕಾಕಚೊಕ್ಕಂಡಹಳ್ಳಿ ಗ್ರಾಮಸ್ಥರಾದ ರಾಮಯ್ಯ, ಮುನಿಯಪ್ಪ, ಪ್ರಕಾಶ್, ಮುರಳೀಧರ್, ವೆಂಕಟಮೂರ್ತಿ, ಮುನಿಯಪ್ಪ, ಮಹೇಶ್, ಗಂಗಾಧರ್, ಮುರಳಿಕೃಷ್ಣ, ಮನೋಹರ್, ರಾಜೇಂದ್ರ, ಹರೀಶ್, ಬಸವರಾಜು, ರವಿಕುಮಾರ್, ಸಂಪತ್, ರೈತಸಂಘದ ಭಕ್ತರಹಳ್ಳಿ ಪ್ರತೀಶ್, ಬೆಳ್ಳೂಟಿ ಮುನಿಕೆಂಪಣ್ಣ, ಡಿ.ವಿ.ನಾರಾಯಣಸ್ವಾಮಿ, ಅಶ್ವತ್ಥನಾರಾಯಣ, ಕೆ.ಎಚ್.ದೇವರಾಜ್, ಶ್ರೀರಾಮಪ್ಪ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







