Home News ಕಾನೂನು ಅರಿವು ನೆರವು ಕಾರ್ಯಕ್ರಮ

ಕಾನೂನು ಅರಿವು ನೆರವು ಕಾರ್ಯಕ್ರಮ

0

ವರದಕ್ಷಿಣೆ, ಕೌಟುಂಬಿಕ ದೌರ್ಜನ್ಯ ಮತ್ತು ಹೆಣ್ಣು ಭ್ರೂಣ ಹತ್ಯೆ ನಿಷೇಧದಂತಹ ಕಾಯ್ದೆಗಳು ಜಾರಿಯಲ್ಲಿದ್ದರೂ ಮಹಿಳೆಗೆ ಶೋಷಣೆ ತಪ್ಪಿಲ್ಲ. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಕಾನೂನು ಅರಿವು ಅತ್ಯಗತ್ಯವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿಜಯ ದೇವರಾಜ ಅರಸ್ ತಿಳಿಸಿದರು.
ನಗರದ ಸ್ತ್ರೀಶಕ್ತಿ ಭವನದಲ್ಲಿ ಮಂಗಳವಾರ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯರಿಗಾಗಿ ಇರುವ ಸೌಲಭ್ಯಗಳುಳ್ಳ ಕಾನೂನಿನಿಂದ ಮಹಳೆಯರು ಉತ್ತಮ ಜೀವನ ನಡೆಸಬಹುದಾಗಿದೆ. ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಶೋಷಣೆಗೆ ಒಳಗಾದ ಮಹಿಳೆಗೆ ಯಾರಿಂದಲೂ ಸಹಕಾರ ಸಿಗದಿದ್ದಾಗ ಆಕೆ ನೇರವಾಗಿ ನ್ಯಾಯಾಲಯಕ್ಕೆ ಬಂದು ಮನವಿ ಸಲ್ಲಿಸಬಹುದು. ಅಂತಹ ಮಹಿಳೆಗೆ ಕಾನೂನು ಸೇವಾ ಸಮಿತಿ ಮೂಲಕ ಉಚಿತವಾಗಿ ನ್ಯಾಯಾಂಗ ಸೇವೆ ಒದಗಿಸಲಾಗುವುದು. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಮುಕ್ತವಾಗಿ ಕರ್ತವ್ಯ ನಿರ್ವಹಿಸಿ ಸ್ವತಂತ್ರ್ಯ ಜೀವನ ನಡೆಸುವುದಕ್ಕೆ ಸಾಕಷ್ಟು ಅವಕಾಶಗಳಿವೆ ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿಜಯ ದೇವರಾಜ ಅರಸ್, ಅಪರ ಸಿವಿಲ್ ನ್ಯಾಯಾಧೀಶರಾದ ಎನ್.ಎ. ಶ್ರೀಕಂಠ, ತಹಶಿಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ, ಕಾರ್ಯದರ್ಶಿ ಬೈರಾರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಲಕ್ಷ್ಮೀದೇವಮ್ಮ, ಸರ್ಕಾರಿ ವಕೀಲ ಈ.ಡಿ.ಶ್ರೀನಿವಾಸ್, ವಕೀಲರಾದ ನಾರಾಯಣಪ್ಪ, ಸುಬ್ರಮಣ್ಯಪ್ಪ, ವೆಂಕಟೇಶ್ ಮತ್ತಿತರರು ಹಾಜರಿದ್ದರು.

error: Content is protected !!